ಅಮೃತಾ 6 ವರ್ಷದ ಹಿಂದೆ ಮದುವೆಯಾಗಿ ಬೆಂಗಳೂರಿನಲ್ಲಿ ವಾಸವಿದ್ದರು. ಲಾಕ್ಡೌನ್ನಿಂದಾಗಿ ಊರಿಗೆ ಬಂದಿದ್ದರು. ಈ ನಡುವೆ ಭೈರಪ್ಪ ಜಮೀನಿನ ಮಣ್ಣು ತೆಗೆಸಿ ಬೇರೆಯವರಿಗೆ ಮಾರಾಟ ಮಾಡಿದ್ದನ್ನು ಅಮೃತ ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ತಂದೆ– ಮಗಳ ನಡುವೆ ಗಲಾಟೆ ನಡೆದಿದೆ.
ಮಾತಿಗೆ ಮಾತು ಬೆಳೆದು ಜಗಳ ಅತಿರೇಕಕ್ಕೆ ಹೋಗಿ ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ವಿವರಿಸಿದ್ದಾರೆ.