ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರಸಿಂಹಮೂರ್ತಿ ಡಿಸಿಸಿ ಬ್ಯಾಂಕ್ ಆಡಳಿತಾಧಿಕಾರಿ

Last Updated 16 ಜುಲೈ 2020, 16:49 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ಡಿಸಿಸಿ ಬ್ಯಾಂಕ್ ಆಡಳಿತಾಧಿಕಾರಿಯಾಗಿ ಸಹಕಾರ ಇಲಾಖೆ ಜಂಟಿ ನಿರ್ದೇಶಕರಾದ ನರಸಿಂಹಮೂರ್ತಿ ಗುರುವಾರ ಅಧಿಕಾರ ಸ್ವೀಕರಿಸಿದರು.‌ ಈವರೆಗೆ ಕೆ.ಎನ್.ರಾಜಣ್ಣ ಬ್ಯಾಂಕ್ ಅಧ್ಯಕ್ಷರಾಗಿದ್ದರು.

ಸಹಕಾರ ಸಂಘಗಳು ಮತ್ತು ಸಹಕಾರ ಬ್ಯಾಂಕ್‌ಗಳ ಚುನಾವಣೆಯನ್ನು ಡಿಸೆಂಬರ್‌ವರೆಗೆ ಮುಂದೂಡಲಾಗಿದೆ. ಈ ಸಂಬಂಧ ಸಹಕಾರ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಆಡಳಿತ ಮಂಡಳಿಗಳ ಅವಧಿ ಮುಕ್ತಾಯವಾಗಿದ್ದರೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವಂತೆ ಸೂಚಿಸಿತ್ತು. ಕೋವಿಡ್‌–19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ.

ನರಸಿಂಹಮೂರ್ತಿ ಆರು ತಿಂಗಳ ಕಾಲ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT