<p><strong>ತುಮಕೂರು:</strong> 12 ವರ್ಷಕ್ಕೆ ಒಮ್ಮೆ ನಡೆಯುವ ದೇವರಾಯನದುರ್ಗ ಭೋಗನರಸಿಂಹಸ್ವಾಮಿ ವಿಶೇಷ ಕುಂಭಾಭಿಷೇಕದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಅನಾನುಕೂಲ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಕ್ಷೇತ್ರಕ್ಕೆ ಬರುವ ಪ್ರವಾಸಿಗರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ದೇವರಾಯನದುರ್ಗದಲ್ಲಿ ಫೆ.13ರಿಂದ ಕುಂಭಾಭಿಷೇಕ ಕಾರ್ಯಕ್ರಮ ಆರಂಭಗೊಳ್ಳುವುದರಿಂದ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.</p>.<p>ದೇವರ ಮೇಲೆ ನನಗೆ ಅಪಾರ ಭಕ್ತಿ ಇದೆ. ಈ ಬಾರಿ ಸ್ವಾಮಿಯ ಸೇವೆ ಮಾಡುವ ಭಾಗ್ಯ ನನಗೆ ದೊರೆತಿದೆ. ಮಹೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಯಾರೊಬ್ಬರಿಗೂ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.</p>.<p>ಸುಮಾರು ₹11.82 ಕೋಟಿ ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಬಾಗೇಪಲ್ಲಿ-ಹಲಗೂರು- ದೇವರಾಯನದುರ್ಗ ರಸ್ತೆ, ತುಮಕೂರು ರಾಷ್ಟ್ರೀಯ ಹೆದ್ದಾರಿ 94ರಿಂದ ದೇವರಾಯನದುರ್ಗ ಪ್ರವಾಸಿ ಮಂದಿರ ರಸ್ತೆ, ತುಮಕೂರು ಜಿಲ್ಲಾ ಮುಖ್ಯರಸ್ತೆಯಿಂದ ದೇವರಾಯನದುರ್ಗ ರಸ್ತೆ, ಊರ್ಡಿಗೆರೆ ರಸ್ತೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಜೆಡಿಎಸ್ ಗ್ರಾಮಾಂತರ ಅಧ್ಯಕ್ಷ ಹಾಲನೂರು ಅನಂತ್ಕುಮಾರ್, ಯುವ ಘಟಕದ ಅಧ್ಯಕ್ಷ ಪ್ರಸನ್ನ, ಮುಖಂಡರಾದ ಬೈರೇಗೌಡ, ಗುತ್ತಿಗೆದಾರ ಸೋಮಶೇಖರ್, ದೇವಾಲಯದ ಆಗಮಿಕರು, ಗ್ರಾ,ಪಂ.ಸದಸ್ಯ ಯಲ್ಲಪ್ಪ, ಐ.ಟಿ.ವಿಭಾಗದ ಅಧ್ಯಕ್ಷ ಮಂಜುನಾಥ್ ಗೌಡ ಇದ್ದರು.</p>.<p>*</p>.<p>ಕುಡಿಯುವ ನೀರು ಪೂರೈಕೆಗಾಗಿ ₹22 ಲಕ್ಷದಲ್ಲಿ ಒವರ್ಹೆಡ್ ಟ್ಯಾಂಕ್, ₹80 ಲಕ್ಷ ವೆಚ್ಚದಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗಿದೆ.<br /><em><strong>-ಡಿ.ಸಿ.ಗೌರಿಶಂಕರ್, ಶಾಸಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> 12 ವರ್ಷಕ್ಕೆ ಒಮ್ಮೆ ನಡೆಯುವ ದೇವರಾಯನದುರ್ಗ ಭೋಗನರಸಿಂಹಸ್ವಾಮಿ ವಿಶೇಷ ಕುಂಭಾಭಿಷೇಕದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಅನಾನುಕೂಲ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಕ್ಷೇತ್ರಕ್ಕೆ ಬರುವ ಪ್ರವಾಸಿಗರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ದೇವರಾಯನದುರ್ಗದಲ್ಲಿ ಫೆ.13ರಿಂದ ಕುಂಭಾಭಿಷೇಕ ಕಾರ್ಯಕ್ರಮ ಆರಂಭಗೊಳ್ಳುವುದರಿಂದ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.</p>.<p>ದೇವರ ಮೇಲೆ ನನಗೆ ಅಪಾರ ಭಕ್ತಿ ಇದೆ. ಈ ಬಾರಿ ಸ್ವಾಮಿಯ ಸೇವೆ ಮಾಡುವ ಭಾಗ್ಯ ನನಗೆ ದೊರೆತಿದೆ. ಮಹೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಯಾರೊಬ್ಬರಿಗೂ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.</p>.<p>ಸುಮಾರು ₹11.82 ಕೋಟಿ ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಬಾಗೇಪಲ್ಲಿ-ಹಲಗೂರು- ದೇವರಾಯನದುರ್ಗ ರಸ್ತೆ, ತುಮಕೂರು ರಾಷ್ಟ್ರೀಯ ಹೆದ್ದಾರಿ 94ರಿಂದ ದೇವರಾಯನದುರ್ಗ ಪ್ರವಾಸಿ ಮಂದಿರ ರಸ್ತೆ, ತುಮಕೂರು ಜಿಲ್ಲಾ ಮುಖ್ಯರಸ್ತೆಯಿಂದ ದೇವರಾಯನದುರ್ಗ ರಸ್ತೆ, ಊರ್ಡಿಗೆರೆ ರಸ್ತೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಜೆಡಿಎಸ್ ಗ್ರಾಮಾಂತರ ಅಧ್ಯಕ್ಷ ಹಾಲನೂರು ಅನಂತ್ಕುಮಾರ್, ಯುವ ಘಟಕದ ಅಧ್ಯಕ್ಷ ಪ್ರಸನ್ನ, ಮುಖಂಡರಾದ ಬೈರೇಗೌಡ, ಗುತ್ತಿಗೆದಾರ ಸೋಮಶೇಖರ್, ದೇವಾಲಯದ ಆಗಮಿಕರು, ಗ್ರಾ,ಪಂ.ಸದಸ್ಯ ಯಲ್ಲಪ್ಪ, ಐ.ಟಿ.ವಿಭಾಗದ ಅಧ್ಯಕ್ಷ ಮಂಜುನಾಥ್ ಗೌಡ ಇದ್ದರು.</p>.<p>*</p>.<p>ಕುಡಿಯುವ ನೀರು ಪೂರೈಕೆಗಾಗಿ ₹22 ಲಕ್ಷದಲ್ಲಿ ಒವರ್ಹೆಡ್ ಟ್ಯಾಂಕ್, ₹80 ಲಕ್ಷ ವೆಚ್ಚದಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗಿದೆ.<br /><em><strong>-ಡಿ.ಸಿ.ಗೌರಿಶಂಕರ್, ಶಾಸಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>