ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಸಾದ ವಿತರಣೆ ನಿರ್ಬಂಧಕ್ಕೆ ಕಾನೂನು ಕಷ್ಟ: ಡಾ.ಜಿ.ಪರಮೇಶ್ವರ

Last Updated 15 ಡಿಸೆಂಬರ್ 2018, 14:31 IST
ಅಕ್ಷರ ಗಾತ್ರ

ತುಮಕೂರು: ‘ಸುಳ್ವಾಡಿ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಜನರು ಮೃತಪಟ್ಟಿರುವುದು ದೊಡ್ಡ ದುರಂತ. ಇದೇ ಪ್ರಕರಣ ಮುಂದಿಟ್ಟುಕೊಂಡು ದೇವಸ್ಥಾನಗಳಲ್ಲಿ ಪ್ರಸಾದ ವಿತರಣೆಗೆ ಸಂಬಂಧಪಟ್ಟಂತೆ ಕಾನೂನು ರೂಪಿಸಿ ನಿರ್ಬಂಧ ಮಾಡುವುದು ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ’ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು.

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಕಾನೂನು ರೂಪಿಸಿ ನಿರ್ಬಂಧಿಸಲು ಹೊರಟರೆ ಅದರಿಂದ ಜನರಿಗೇ ತೊಂದರೆ ಆಗುತ್ತದೆ. ಕೆಲವು ಕಡೆ ದೇವಸ್ಥಾನದವರು ಪ್ರಸಾದ ವಿತರಿಸುತ್ತಾರೆ. ಮತ್ತೊಂದಿಷ್ಟು ಕಡೆ ಭಕ್ತರು ಪೂಜೆ ಮಾಡಿ ಪ್ರಸಾದ ಹಂಚುತ್ತಾರೆ. ಹೀಗೆ ನಾನಾ ರೀತಿಯ ಪದ್ಧತಿಯನ್ನು ಈ ವ್ಯವಸ್ಥೆಯಲ್ಲಿ ಅನುಸರಿಸಿಕೊಂಡು ಬರಲಾಗಿದೆ. ಹೀಗಾಗಿ ನಿರ್ಬಂಧ ವಿಧಿಸುವುದು ಕಷ್ಟ ಎನ್ನುವುದು ನನ್ನ ಅಭಿಪ್ರಾಯ’ ಎಂದರು.

‘ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಹರಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ನೀರು ಬಿಟ್ಟಿದ್ದಾರೆ. ಜಿಲ್ಲೆಯ ನೀರಿನ ಸಮಸ್ಯೆ ಹೋಗಲಾಡಿಸುವ ಪ್ರಯತ್ನ ನಡೆದಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT