ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೂ ಕರ್ನಾಟಕಕ್ಕೂ ಏನು ಸಂಬಂಧ? ಅವರು ಪರಿಹಾರ ನೀಡುವ ಮೂಲಕ ಇಲ್ಲಿನ ಜನರು ಗಲಭೆ ಮಾಡಿಕೊಂಡು ಸತ್ತರೂ ಪರಿಹಾರ ಕೊಡುತ್ತೀವಿ ಎಂದು ಪ್ರಚೋದಿಸುತ್ತಿದ್ದಾರೆ. ಇದರಿಂದ ಕೋಮುಗಲಭೆ ಎಬ್ಬಿಸಲು ವಿರೋಧ ಪಕ್ಷಗಳು ಹುನ್ನಾರ ಮಾಡುತ್ತಿವೆ ಎಂಬುದು ಸ್ಪಷ್ಟವಾಗಿದೆ’ ಎಂದರು.