<p><strong>ಪಾವಗಡ:</strong> ಸೀಮೆ ಎಣ್ಣೆ ಸ್ಟೌ ಹಚ್ಚುವಾಗ ಬೆಂಕಿ ತಗುಲಿ ತಾಲ್ಲೂಕಿನ ಎ.ಎಚ್.ಪಾಳ್ಯದ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ.</p>.<p>ಎ.ಎಚ್.ಪಾಳ್ಯದ ನವೀನ್ ಕುಮಾರ್ (23) ಮೃತರು. ಶುಕ್ರವಾರ ಸೀಮೆ ಎಣ್ಣೆ ಸ್ಟೌ ಅನ್ನು ಬಿಸಿ ನೀರು ಕಾಯಿಸಲು ಹಚ್ಚಿದ್ದಾರೆ. ಆಕಸ್ಮಿಕವಾಗಿ ಬೆಂಕಿ ವ್ಯಾಪಿಸಿ ದೇಹದ ಹಿಂಬದಿ ಭಾಗ ಸುಟ್ಟಿದೆ.</p>.<p>ನವೀನ್ ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಗಾಯಾಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮೃತರ ಕುಟುಂಬ ಸದಸ್ಯರು ಶನಿವಾರ, ಸಾವಿಗೆ ವೈದ್ಯರು, ಸಿಬ್ಬಂದಿ ಕಾರಣ ಎಂದು ಸರ್ಕಾರಿ ಆಸ್ಪತ್ರೆ ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.</p>.<p>ಸುಟ್ಟ ಗಾಯಗಳಾಗಿದ್ದರು ಗಾಯಾಳು ಲವ ಲವಿಕೆಯಿಂದಿದ್ದರು. ರಾತ್ರಿ ಔಷಧಿ ಸೇವಿಸಿದ ನಂತರ ಮೃತಪಟ್ಟಿದ್ದಾರೆ ಎಂದು ಮೃತರ ಪತ್ನಿ ಆರೋಪಿಸಿದರು. ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪ್ರತಿಭಟನಾ ನಿರತರ ಮನವೊಲಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ಸೀಮೆ ಎಣ್ಣೆ ಸ್ಟೌ ಹಚ್ಚುವಾಗ ಬೆಂಕಿ ತಗುಲಿ ತಾಲ್ಲೂಕಿನ ಎ.ಎಚ್.ಪಾಳ್ಯದ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ.</p>.<p>ಎ.ಎಚ್.ಪಾಳ್ಯದ ನವೀನ್ ಕುಮಾರ್ (23) ಮೃತರು. ಶುಕ್ರವಾರ ಸೀಮೆ ಎಣ್ಣೆ ಸ್ಟೌ ಅನ್ನು ಬಿಸಿ ನೀರು ಕಾಯಿಸಲು ಹಚ್ಚಿದ್ದಾರೆ. ಆಕಸ್ಮಿಕವಾಗಿ ಬೆಂಕಿ ವ್ಯಾಪಿಸಿ ದೇಹದ ಹಿಂಬದಿ ಭಾಗ ಸುಟ್ಟಿದೆ.</p>.<p>ನವೀನ್ ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಗಾಯಾಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮೃತರ ಕುಟುಂಬ ಸದಸ್ಯರು ಶನಿವಾರ, ಸಾವಿಗೆ ವೈದ್ಯರು, ಸಿಬ್ಬಂದಿ ಕಾರಣ ಎಂದು ಸರ್ಕಾರಿ ಆಸ್ಪತ್ರೆ ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.</p>.<p>ಸುಟ್ಟ ಗಾಯಗಳಾಗಿದ್ದರು ಗಾಯಾಳು ಲವ ಲವಿಕೆಯಿಂದಿದ್ದರು. ರಾತ್ರಿ ಔಷಧಿ ಸೇವಿಸಿದ ನಂತರ ಮೃತಪಟ್ಟಿದ್ದಾರೆ ಎಂದು ಮೃತರ ಪತ್ನಿ ಆರೋಪಿಸಿದರು. ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪ್ರತಿಭಟನಾ ನಿರತರ ಮನವೊಲಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>