ಶಿರಾ: ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದ ಗಂಗಮ್ಮನ ಕೆರೆ ಬಳಿ ಸೋಮವಾರ ಎರಡು ದ್ವಿಚಕ್ರವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಗೌಡಗೆರೆ ಗ್ರಾಮದ ಹನುಮಂತೇಗೌಡ (35) ಮತ್ತು ತುಮಕೂರು ತಾಲ್ಲೂಕಿನ ಕೋರಾ ಹೋಬಳಿಯ ಗೌರಗೊಂಡನಹಳ್ಳಿಯ ರಾಮಯ್ಯ(40) ಮೃತಪಟ್ಟವರು.
ಗೌರಗೊಂಡನಹಳ್ಳಿಯ ರಾಮಕೃಷ್ಣಯ್ಯ ತೀವ್ರವಾಗಿ ಗಾಯಗೊಂಡಿದ್ದು, ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ.
ತೋವಿನಕೆರೆ- ಚಿನ್ನೇನಹಳ್ಳಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಹನುಮಂತೇಗೌಡ ದ್ವಿಚಕ್ರ ವಾಹನದಲ್ಲಿ ತೋವಿನಕೆರೆ ಕಡೆಗೆ ಹೋಗುತ್ತಿದ್ದರು. ಎದುರಿಗೆ ದ್ವಿಚಕ್ರವಾಹನದಲ್ಲಿ ರಾಮಯ್ಯ ಬರುತ್ತಿದ್ದರು. ಬೈಕ್ಗಳ ನಡುವೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.