ಐವರು ಸ್ನೇಹಿತರು ಈಜಲು ತೆರಳಿದ್ದರು. ಸರಿಯಾಗಿ ಈಜು ಬಾರದ ಸತೀಶ ನೀರಿನಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ಹೋದ ನಂದನ್ ಕುಮಾರ್ ಮೃತಪಟ್ಟಿದ್ದಾನೆ. ಈ ಇಬ್ಬರೂ ಮುಳುಗುತ್ತಿರುವುದನ್ನು ಗಮನಿಸಿದ ಸ್ನೇಹಿತ ಆಕಾಶ್ ನೆರವಿಗೆ ಧಾವಿಸಿದ್ದಾನೆ. ಆಗ ಅಪಾಯದ ಮುನ್ಸೂಚನೆ ಅರಿತ ಮತ್ತೊಬ್ಬ ಸ್ನೇಹಿತ ಮಧುಸೂದನ, ಆಕಾಶ್ನನ್ನು ಹಿಂದಕ್ಕೆ ಎಳೆದುಕೊಂಡು ಪ್ರಾಣಾಪಾಯದಿಂದ ಪಾರು ಮಾಡಿದ್ದಾನೆ.