ಗಣರಾಜ್ಯೋತ್ಸವ ಆಚರಣೆ ಬಗ್ಗೆ ಸರ್ಕಾರ ನೀಡಿರುವ ಸೂಚನೆಗಳನ್ನು ಆರಂಭದಲ್ಲಿ ಓದಿ ತಿಳಿಸಿದ ತಹಶೀಲ್ದಾರ್, ಸಚಿವ ಜೆ.ಸಿ. ಮಾಧುಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಪೊಲೀಸ್, ಗೃಹರಕ್ಷಕ ದಳ ಹಾಗೂ ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಯಲಿದೆ. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಿಹಿ ವಿತರಣೆ ನಡೆಯಲಿದೆ ಎಂದು ತಿಳಿಸಿದರು.