<p><strong>ತುಮಕೂರು:</strong> ‘ಎಚ್.ಡಿ.ದೇವೇಗೌಡ ಅವರು ಸುಮಾರು 3 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ನ ಮಹಿಳಾ ಪದಾಧಿಕಾರಿಗಳು ಒಗ್ಗಟ್ಟಿನಿಂದ ಶ್ರಮಿಸುತ್ತೇವೆ’ ಎಂದು ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರುದ್ರೇಶ್ ಹೇಳಿದರು.</p>.<p>ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತುಮಕೂರು ಲೋಕಸಭಾ ವ್ಯಾಪ್ತಿಯ ಎಲ್ಲ ತಾಲ್ಲೂಕುಗಳಲ್ಲಿ ಈಗಾಗಲೇ ಸಭೆ ಮಾಡಿದ್ದು, ಎಲ್ಲರ ಧ್ಯೇಯ ದೇವೇಗೌಡ ಅವರನ್ನು ಗೆಲ್ಲಿಸುವುದೇ ಆಗಿದೆ ಎಂದರು.</p>.<p>ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ಈಗಾಗಲೇ ನೀಡಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಮಹಿಳೆಯರಿಗೆ ಎಲ್ಲ ರಂಗದಲ್ಲೂ ಪ್ರತ್ಯೇಕ ಮೀಸಲಾತಿ ನೀಡಬೇಕೆಂದು ಮನವಿ ಮಾಡಲಾಗುವುದು ಎಂದು ಹೇಳಿದರು.</p>.<p>‘ದೇವೇಗೌಡ ಅವರು ಬರಿ ಜಿಲ್ಲೆಗೆ ಸೀಮಿತವಾಗಿಲ್ಲ, ರಾಜ್ಯ, ದೇಶದ ಪ್ರಮುಖರಲ್ಲಿ ಒಬ್ಬರಾಗಿದ್ದು, ಅವರ ಗೆಲುವು ಬಹುಮುಖ್ಯವಾಗಿದೆ. ಮಹಿಳೆಯರ ಮೇಲೆ ಅಪಾರ ಗೌರವ ಹೊಂದಿರುವ ಅವರು ಮಹಿಳೆಯರಿಗೆ ಪ್ರತ್ಯೇಕ ಸ್ಥಾನಮಾನ ನೀಡಿದ್ದಾರೆ’ ಎಂದು ತಿಳಿಸಿದರು.</p>.<p>ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಹಿಂದುಳಿದ ವರ್ಗದ ರಾಜ್ಯ ಘಟಕದ ಕಾರ್ಯದರ್ಶಿ ನಾಗಮಣಿ, ನೇತ್ರಾವತಿ, ಕವಿತಾ ಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಎಚ್.ಡಿ.ದೇವೇಗೌಡ ಅವರು ಸುಮಾರು 3 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ನ ಮಹಿಳಾ ಪದಾಧಿಕಾರಿಗಳು ಒಗ್ಗಟ್ಟಿನಿಂದ ಶ್ರಮಿಸುತ್ತೇವೆ’ ಎಂದು ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರುದ್ರೇಶ್ ಹೇಳಿದರು.</p>.<p>ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತುಮಕೂರು ಲೋಕಸಭಾ ವ್ಯಾಪ್ತಿಯ ಎಲ್ಲ ತಾಲ್ಲೂಕುಗಳಲ್ಲಿ ಈಗಾಗಲೇ ಸಭೆ ಮಾಡಿದ್ದು, ಎಲ್ಲರ ಧ್ಯೇಯ ದೇವೇಗೌಡ ಅವರನ್ನು ಗೆಲ್ಲಿಸುವುದೇ ಆಗಿದೆ ಎಂದರು.</p>.<p>ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ಈಗಾಗಲೇ ನೀಡಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಮಹಿಳೆಯರಿಗೆ ಎಲ್ಲ ರಂಗದಲ್ಲೂ ಪ್ರತ್ಯೇಕ ಮೀಸಲಾತಿ ನೀಡಬೇಕೆಂದು ಮನವಿ ಮಾಡಲಾಗುವುದು ಎಂದು ಹೇಳಿದರು.</p>.<p>‘ದೇವೇಗೌಡ ಅವರು ಬರಿ ಜಿಲ್ಲೆಗೆ ಸೀಮಿತವಾಗಿಲ್ಲ, ರಾಜ್ಯ, ದೇಶದ ಪ್ರಮುಖರಲ್ಲಿ ಒಬ್ಬರಾಗಿದ್ದು, ಅವರ ಗೆಲುವು ಬಹುಮುಖ್ಯವಾಗಿದೆ. ಮಹಿಳೆಯರ ಮೇಲೆ ಅಪಾರ ಗೌರವ ಹೊಂದಿರುವ ಅವರು ಮಹಿಳೆಯರಿಗೆ ಪ್ರತ್ಯೇಕ ಸ್ಥಾನಮಾನ ನೀಡಿದ್ದಾರೆ’ ಎಂದು ತಿಳಿಸಿದರು.</p>.<p>ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಹಿಂದುಳಿದ ವರ್ಗದ ರಾಜ್ಯ ಘಟಕದ ಕಾರ್ಯದರ್ಶಿ ನಾಗಮಣಿ, ನೇತ್ರಾವತಿ, ಕವಿತಾ ಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>