ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಮಧುಗಿರಿ’ ಜಿಲ್ಲೆ ಘೋಷಣೆ ಮಾಡಿ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಶಾಸಕ ಡಾ.ಜಿ.ಪರಮೇಶ್ವರ ಪತ್ರ
Last Updated 30 ಸೆಪ್ಟೆಂಬರ್ 2019, 16:19 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿಯು ಎಲ್ಲ ಹಂತದಲ್ಲಿಯೂ ಜಿಲ್ಲೆಯಾಗಿ ಪರಿವರ್ತನೆ ಹೊಂದಲು ಅರ್ಹತೆ ಹೊಂದಿದ್ದು, ನೂತನ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಶಾಸಕ ಡಾ.ಜಿ.ಪರಮೇಶ್ವರ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

ಮಧುಗಿರಿ, ಪಾವಗಡ, ಕೊರಟಗೆರೆ ಮತ್ತು ಶಿರಾ ಕಂದಾಯ ತಾಲ್ಲೂಕುಗಳನ್ನು ಒಟ್ಟುಗೂಡಿಸಿ ಪ್ರತ್ಯೇಕವಾಗಿ ನೂತನ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಮಧುಗಿರಿ ತಾಲ್ಲೂಕು ಭೌಗೋಳಿಕವಾಗಿ ಹೆಚ್ಚಿನ ವಿಸ್ತಾರವನ್ನು ಹೊಂದಿದೆ. ಮಧುಗಿರಿ ಕೇಂದ್ರ ಸ್ಥಾನದಲ್ಲಿ ಲೋಕೋಪಯೊಗಿ, ಜಿಲ್ಲಾ ಪಂಚಾಯಿತಿ, ಬೆಸ್ಕಾಂ, ಡಿವೈಎಸ್ಪಿ, ಎತ್ತಿನಹೊಳೆ ಯೋಜನೆ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಉಪವಿಭಾಗಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ.

ಹೆಚ್ಚುವರಿ ಜಿಲ್ಲಾ ನ್ಯಾಯಾಲಯವೂ ಮಧುಗಿರಿಯಲ್ಲಿದೆ. ಪ್ರತ್ಯೇಕ ಶೈಕ್ಷಣಿಕ ಜಿಲ್ಲೆಯಾಗಿರುವ ಮಧುಗಿರಿಯು ನೆರೆಯ ತಾಲ್ಲೂಕುಗಳಾದ ಪಾವಗಡ, ಕೊರಟಗೆರೆ ಮತ್ತು ಶಿರಾ ತಾಲ್ಲೂಕುಗಳಿಗೆ ಕೃಷಿ ಉತ್ಪನ್ನ, ವಾಣಿಜ್ಯ ಉತ್ಪನ್ನಗಳ ಮಾರುಕಟ್ಟೆಗೆ ಕೇಂದ್ರ ಸ್ಥಾನವಾಗಿದೆ ಎಂದು ಪತ್ರದಲ್ಲಿ ಡಾ.ಪರಮೇಶ್ವರ ವಿವರಿಸಿದ್ದಾರೆ.

ಎಲ್ಲ ಹಂತದಲ್ಲಿಯೂ ಜಿಲ್ಲೆಯಾಗಿ ಪರಿವರ್ತನೆ ಹೊಂದಲು ಅರ್ಹತೆ ಹೊಂದಿದೆ. ನೂತನ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂಬುದು ಆ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ.ಹಾಗಾಗಿ ಪ್ರತ್ಯೇಕವಾಗಿ ನೂತನ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT