<p><strong>ತುಮಕೂರು</strong>: ಅಧಿಕಾರದ ಒತ್ತಡಗಳಿಗೆ ಸಿಲುಕಿ ಪ್ರಾಮಾಣಿಕತೆ, ಮೌಲ್ಯ, ಮಾನವೀಯತೆ ಕಳೆದುಕೊಳ್ಳುತ್ತಿದ್ದೇವೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಜಯಂತ ಕುಮಾರ್ ವಿಷಾದಿಸಿದರು.</p>.<p>ತುಮಕೂರು ವಿ.ವಿ ಶನಿವಾರ ಹಮ್ಮಿಕೊಂಡಿದ್ದ ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗ ಉದ್ಘಾಟಿಸಿ ಮಾತನಾಡಿ, ‘ಮಾನವೀಯ ಮೌಲ್ಯಗಳಿಗೆ ಬೆಲೆ ಕಟ್ಟಿದಾಗ ಬದುಕಿನ ಮೌಲ್ಯಗಳು ಕುಸಿಯುತ್ತವೆ. ಸಮಗ್ರತೆಯನ್ನು ಸಾಧಿಸುವ ಬದುಕನ್ನು ತೊರೆದು, ನೀತಿ, ನಿಯಮ, ಮಾನವೀಯ ಮೌಲ್ಯಗಳನ್ನು ಮರೆತು ಅಶಿಸ್ತಿನಿಂದ ಬದುಕುತ್ತಿದ್ದೇವೆ’ ಎಂದರು.</p>.<p>ಕೇವಲ ಮಾಹಿತಿ ಪಡೆಯುವ ವಿದ್ಯೆಗಿಂತ ಅರಿವು, ಅನುಭವಕ್ಕೆ ಬರುವ ವಿದ್ಯೆಯನ್ನು ವಿದ್ಯಾರ್ಥಿಗಳು ಕಲಿಯಬೇಕು. ಪರಿಸರ, ಸಮಾಜದ ನೋವು, ಅಸಮಾಧಾನ, ಸಮಸ್ಯೆಗಳನ್ನು ಆಲಿಸಿದರೆ ಅರಿವಿಗೆ ಬಾರದ ಎಷ್ಟೋ ಸಂಗತಿಗಳು ವಿದ್ಯೆಯ ರೂಪದಲ್ಲಿ ನಮ್ಮನ್ನು ತಲುಪಲಿವೆ ಎಂದು ಸಲಹೆ ಮಾಡಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ, ‘ನ್ಯಾಯಾಧೀಶರು ತೀರ್ಪು ಪ್ರಕಟಿಸುವ ಬದಲು, ನ್ಯಾಯ ಒದಗಿಸಬೇಕು. ಬಸವಣ್ಣನವರ ‘ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ’ ವಚನವೇ ಇಂದಿನ ಕಾನೂನು ಅಧ್ಯಯನದ ಪುಸ್ತಕಗಳಾಗಿವೆ ಎಂದು ಹೇಳಿದರು.</p>.<p>ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ‘ಜ್ಞಾನ ಅಧ್ಯಯನದಿಂದ ಸಿಗುತ್ತದೆ. ಮೌಲ್ಯಗಳು ಅನುಭವದಿಂದ ಬರುತ್ತವೆ. ಶಿಕ್ಷಕರಿಂದ ಮೌಲ್ಯಾಧಾರಿತ ಶಿಕ್ಷಣ ಸಿಗುವುದು ಅಪರೂಪವಾಗಿದೆ’ ಎಂದು ನುಡಿದರು.</p>.<p>ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗದ ಸಂಯೋಜಕ ಪ್ರೊ.ಎ.ಮೋಹನ್ ರಾಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನ ಕುಮಾರ್, ಹಣಕಾಸು ಅಧಿಕಾರಿ ಪ್ರೊ.ಪಿ.ಪರಮಶಿವಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಅಧಿಕಾರದ ಒತ್ತಡಗಳಿಗೆ ಸಿಲುಕಿ ಪ್ರಾಮಾಣಿಕತೆ, ಮೌಲ್ಯ, ಮಾನವೀಯತೆ ಕಳೆದುಕೊಳ್ಳುತ್ತಿದ್ದೇವೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಜಯಂತ ಕುಮಾರ್ ವಿಷಾದಿಸಿದರು.</p>.<p>ತುಮಕೂರು ವಿ.ವಿ ಶನಿವಾರ ಹಮ್ಮಿಕೊಂಡಿದ್ದ ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗ ಉದ್ಘಾಟಿಸಿ ಮಾತನಾಡಿ, ‘ಮಾನವೀಯ ಮೌಲ್ಯಗಳಿಗೆ ಬೆಲೆ ಕಟ್ಟಿದಾಗ ಬದುಕಿನ ಮೌಲ್ಯಗಳು ಕುಸಿಯುತ್ತವೆ. ಸಮಗ್ರತೆಯನ್ನು ಸಾಧಿಸುವ ಬದುಕನ್ನು ತೊರೆದು, ನೀತಿ, ನಿಯಮ, ಮಾನವೀಯ ಮೌಲ್ಯಗಳನ್ನು ಮರೆತು ಅಶಿಸ್ತಿನಿಂದ ಬದುಕುತ್ತಿದ್ದೇವೆ’ ಎಂದರು.</p>.<p>ಕೇವಲ ಮಾಹಿತಿ ಪಡೆಯುವ ವಿದ್ಯೆಗಿಂತ ಅರಿವು, ಅನುಭವಕ್ಕೆ ಬರುವ ವಿದ್ಯೆಯನ್ನು ವಿದ್ಯಾರ್ಥಿಗಳು ಕಲಿಯಬೇಕು. ಪರಿಸರ, ಸಮಾಜದ ನೋವು, ಅಸಮಾಧಾನ, ಸಮಸ್ಯೆಗಳನ್ನು ಆಲಿಸಿದರೆ ಅರಿವಿಗೆ ಬಾರದ ಎಷ್ಟೋ ಸಂಗತಿಗಳು ವಿದ್ಯೆಯ ರೂಪದಲ್ಲಿ ನಮ್ಮನ್ನು ತಲುಪಲಿವೆ ಎಂದು ಸಲಹೆ ಮಾಡಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ, ‘ನ್ಯಾಯಾಧೀಶರು ತೀರ್ಪು ಪ್ರಕಟಿಸುವ ಬದಲು, ನ್ಯಾಯ ಒದಗಿಸಬೇಕು. ಬಸವಣ್ಣನವರ ‘ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ’ ವಚನವೇ ಇಂದಿನ ಕಾನೂನು ಅಧ್ಯಯನದ ಪುಸ್ತಕಗಳಾಗಿವೆ ಎಂದು ಹೇಳಿದರು.</p>.<p>ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ‘ಜ್ಞಾನ ಅಧ್ಯಯನದಿಂದ ಸಿಗುತ್ತದೆ. ಮೌಲ್ಯಗಳು ಅನುಭವದಿಂದ ಬರುತ್ತವೆ. ಶಿಕ್ಷಕರಿಂದ ಮೌಲ್ಯಾಧಾರಿತ ಶಿಕ್ಷಣ ಸಿಗುವುದು ಅಪರೂಪವಾಗಿದೆ’ ಎಂದು ನುಡಿದರು.</p>.<p>ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗದ ಸಂಯೋಜಕ ಪ್ರೊ.ಎ.ಮೋಹನ್ ರಾಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನ ಕುಮಾರ್, ಹಣಕಾಸು ಅಧಿಕಾರಿ ಪ್ರೊ.ಪಿ.ಪರಮಶಿವಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>