<p>ತಿಪಟೂರು: ತಾಲ್ಲೂಕಿನಲ್ಲಿ ಗೌರಿ, ಗಣೇಶ ಮೂರ್ತಿಗಳಿಗೆ ಬೇಡಿಕೆ ಕುಸಿದಿದ್ದು, ವ್ಯಾಪಾರಿಗಳ ಆತಂಕಕ್ಕೆ ಕಾರಣವಾಗಿದೆ.</p>.<p>ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದ ಗಣಪತಿ ಹಬ್ಬ ಎರಡು ವರ್ಷಗಳಿಂದ ಕೋವಿಡ್ನಿಂದಾಗಿ ಕಳೆಗುಂದಿದೆ.</p>.<p>ತಾಲ್ಲೂಕಿನಲ್ಲಿ ಬುಧವಾರ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನರು, ಗೌರಿ-ಗಣೇಶ ಮೂರ್ತಿಗಳ ಖರೀದಿಗೆ ಹಿಂದೇಟು ಹಾಕಿದ್ದಾರೆ. ಈ ಬಾರಿ ಸರ್ಕಾರವೂ ಅನೇಕ ಷರತ್ತು ವಿಧಿಸಿ, ಹಬ್ಬ ಆಚರಣೆಗೆ ಅನುಮತಿ ನೀಡಿದೆ. ಆದಾಗ್ಯೂ ಅನೇಕರು ಗಣಪತಿ ಕೂರಿಸಲು ಹಿಂದೇಟು ಹಾಕಿದ್ದಾರೆ.</p>.<p>ಗೌರಿ-ಗಣೇಶ ಮೂರ್ತಿ ತಯಾರಕರು ಮೂರ್ತಿಗಳನ್ನು ಮಾರಾಟಕ್ಕೆ ತಂದಿಟ್ಟಿದ್ದು, ಗ್ರಾಹಕರಿಗಾಗಿ ಎದುರು ನೋಡುವಂತಾಗಿದೆ. ಇನ್ನೂ ಕೆಲವರು ಕಡಿಮೆ ಬಜೆಟ್ನಲ್ಲಿ ಹಬ್ಬ ಆಚರಣೆಗೆ ಮುಂದಾಗಿದ್ದಾರೆ.</p>.<p>ಕೊರೊನಾ ಸಂಕಷ್ಟವು ಅನೇಕ ವರ್ತಕರು, ಕುಂಬಾರರ ಪಾಲಿಗೆ ಸವಾಲಾಗಿ ಪರಿಣಮಿಸಿದೆ.</p>.<p>‘ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಅನೇಕ ಷರತ್ತುಗಳನ್ನು ವಿಧಿಸಿದೆ. ಮನೆಯಲ್ಲಿಯೇ ಪ್ರತಿಷ್ಠಾಪಿಸುವ ಸಲುವಾಗಿ ಕಡಿಮೆ ಎತ್ತರದ ಮೂರ್ತಿಗಳನ್ನು ಮಾಡಲಾಗಿದೆ. ಆದಾಗ್ಯೂ ಈ ಬಾರಿ ವಿಗ್ರಹ ಖರೀದಿಸುವವರ ಸಂಖ್ಯೆ ವಿರಳವಾಗಿದೆ’ ಎಂದು ಮೂರ್ತಿ ತಯಾರಕ ಕಾಂತಣ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ತಾಲ್ಲೂಕಿನಲ್ಲಿ ಗೌರಿ, ಗಣೇಶ ಮೂರ್ತಿಗಳಿಗೆ ಬೇಡಿಕೆ ಕುಸಿದಿದ್ದು, ವ್ಯಾಪಾರಿಗಳ ಆತಂಕಕ್ಕೆ ಕಾರಣವಾಗಿದೆ.</p>.<p>ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದ ಗಣಪತಿ ಹಬ್ಬ ಎರಡು ವರ್ಷಗಳಿಂದ ಕೋವಿಡ್ನಿಂದಾಗಿ ಕಳೆಗುಂದಿದೆ.</p>.<p>ತಾಲ್ಲೂಕಿನಲ್ಲಿ ಬುಧವಾರ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನರು, ಗೌರಿ-ಗಣೇಶ ಮೂರ್ತಿಗಳ ಖರೀದಿಗೆ ಹಿಂದೇಟು ಹಾಕಿದ್ದಾರೆ. ಈ ಬಾರಿ ಸರ್ಕಾರವೂ ಅನೇಕ ಷರತ್ತು ವಿಧಿಸಿ, ಹಬ್ಬ ಆಚರಣೆಗೆ ಅನುಮತಿ ನೀಡಿದೆ. ಆದಾಗ್ಯೂ ಅನೇಕರು ಗಣಪತಿ ಕೂರಿಸಲು ಹಿಂದೇಟು ಹಾಕಿದ್ದಾರೆ.</p>.<p>ಗೌರಿ-ಗಣೇಶ ಮೂರ್ತಿ ತಯಾರಕರು ಮೂರ್ತಿಗಳನ್ನು ಮಾರಾಟಕ್ಕೆ ತಂದಿಟ್ಟಿದ್ದು, ಗ್ರಾಹಕರಿಗಾಗಿ ಎದುರು ನೋಡುವಂತಾಗಿದೆ. ಇನ್ನೂ ಕೆಲವರು ಕಡಿಮೆ ಬಜೆಟ್ನಲ್ಲಿ ಹಬ್ಬ ಆಚರಣೆಗೆ ಮುಂದಾಗಿದ್ದಾರೆ.</p>.<p>ಕೊರೊನಾ ಸಂಕಷ್ಟವು ಅನೇಕ ವರ್ತಕರು, ಕುಂಬಾರರ ಪಾಲಿಗೆ ಸವಾಲಾಗಿ ಪರಿಣಮಿಸಿದೆ.</p>.<p>‘ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಅನೇಕ ಷರತ್ತುಗಳನ್ನು ವಿಧಿಸಿದೆ. ಮನೆಯಲ್ಲಿಯೇ ಪ್ರತಿಷ್ಠಾಪಿಸುವ ಸಲುವಾಗಿ ಕಡಿಮೆ ಎತ್ತರದ ಮೂರ್ತಿಗಳನ್ನು ಮಾಡಲಾಗಿದೆ. ಆದಾಗ್ಯೂ ಈ ಬಾರಿ ವಿಗ್ರಹ ಖರೀದಿಸುವವರ ಸಂಖ್ಯೆ ವಿರಳವಾಗಿದೆ’ ಎಂದು ಮೂರ್ತಿ ತಯಾರಕ ಕಾಂತಣ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>