ಗಂಡು ಕೃಷ್ಣಮೃಗದ ಕಾಲು ಮತ್ತು ಹೊಟ್ಟೆ ಭಾಗಕ್ಕೆ ಬಲವಾಗಿ ಹೊಡೆತ ಬಿದ್ದು ಮೃತಪಟ್ಟಿದೆ. ಭಾನುವಾರ ಬೆಳಿಗ್ಗೆರೈತರು ಕೃಷ್ಣಮೃಗ ಮೃತಪಟ್ಟಿರುವ ವಿಷಯವನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ತಕ್ಷಣಅಧಿಕಾರಿಗಳು ಭೇಟಿ ನೀಡಿ, ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ, ರಾಮದೇವರ ಬೆಟ್ಟದ ಅರಣ್ಯ ಪ್ರದೇಶದ ನರ್ಸರಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಕೃಷ್ಣಮೃಗಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರನ್ನು ಪತ್ತೆ ಹಚ್ಚಲು ಕ್ರಮ ವಹಿಸಲಾಗಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ವಾಸದೇವಮೂರ್ತಿ ಪ್ರಜಾವಾಣಿಗೆ ತಿಳಿಸಿದರು.