<p>ತುಮಕೂರು: ಜಿಲ್ಲಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ದಲಿತ ಸಮುದಾಯದ ನೌಕರರಿಗೆ ಸಂಬಳ ಕೊಡದೆ, ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಸ್ಥಾನಿಕ ವೈದ್ಯಾಧಿಕಾರಿ ಚೇತನ್ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.</p>.<p>‘ಆರೋಗ್ಯ ರಕ್ಷಾ ಸಮಿತಿ’ಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರಿಗೆ ಕಳೆದ 6 ತಿಂಗಳಿನಿಂದ ಸಂಬಳ ಪಾವತಿಸಿಲ್ಲ. ವೇತನ ಇಲ್ಲದೆ ಕುಟುಂಬದ ನಿರ್ವಹಣೆಗೆ ಕಷ್ಟಕರವಾಗಿದೆ. ನೌಕರರು ಈಗಾಗಲೇ ಸಾಲದ ಸುಳಿಗೆ ಸಿಲುಕಿದ್ದಾರೆ. ನ್ಯಾಯಯುತವಾಗಿ ಬರಬೇಕಾದ ವೇತನ ನೀಡುವಂತೆ ಕೇಳಿದರೆ, ಯಾರೂ ಇದಕ್ಕೆ ಸ್ಪಂದಿಸುತ್ತಿಲ್ಲ’ ಎಂದು ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ವಿ.ಶಿವಶಂಕರ್ ದೂರಿದ್ದಾರೆ.</p>.<p>ಜಿಲ್ಲಾ ಶಸ್ತ್ರ ಚಿಕಿತ್ಸಕರು, ಸ್ಥಾನಿಕ ವೈದ್ಯಾಧಿಕಾರಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ‘ವೇತನ ಬಿಡುಗಡೆಗೊಳಿಸಿ’ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದರೂ ಸಹ ಆಸ್ಪತ್ರೆಯ ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ತಿಳಿಸಿದ್ದಾರೆ.</p>.<p>ವೈದ್ಯಾಧಿಕಾರಿ ಚೇತನ್ ಕ್ಷುಲ್ಲಕ ಕಾರಣ ನೀಡುತ್ತ, ಉದ್ಧಟತನ ತೋರುತ್ತಿದ್ದಾರೆ. ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ದಲಿತ, ಅಲ್ಪ ಸಂಖ್ಯಾತ ಸಮುದಾಯದ ನೌಕರರನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಕೆಲಸ ತೊರೆಯುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p>ಹಾಜರಾತಿ ಪುಸ್ತಕ ನೀಡದಿರುವುದು, ಹಾಜರಾತಿ ತಿದ್ದುವ ಮೂಲಕ ವೇತನ ಪಾವತಿಗೆ ಅಡ್ಡಿಯಾಗುತ್ತಿದ್ದಾರೆ. ಹಲವು ವರ್ಷಗಳಿಂದ ಇದೇ ಪರಿಪಾಟ ಮುಂದುವರಿಸಿಕೊಂಡು ಬಂದಿದ್ದಾರೆ. ದಲಿತರ ಬದುಕುವ ಹಕ್ಕು ಕಸಿದುಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಆಸ್ಪತ್ರೆಯಲ್ಲಿ ದುಡಿಯುತ್ತಿರುವ ದಲಿತ, ಅಲ್ಪ ಸಂಖ್ಯಾತ ನೌಕರರ ಹಿತರಕ್ಷಣೆ ದೃಷ್ಟಿಯಿಂದ ವೈದ್ಯಾಧಿಕಾರಿ ಚೇತನ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಜಿಲ್ಲಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ದಲಿತ ಸಮುದಾಯದ ನೌಕರರಿಗೆ ಸಂಬಳ ಕೊಡದೆ, ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಸ್ಥಾನಿಕ ವೈದ್ಯಾಧಿಕಾರಿ ಚೇತನ್ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.</p>.<p>‘ಆರೋಗ್ಯ ರಕ್ಷಾ ಸಮಿತಿ’ಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರಿಗೆ ಕಳೆದ 6 ತಿಂಗಳಿನಿಂದ ಸಂಬಳ ಪಾವತಿಸಿಲ್ಲ. ವೇತನ ಇಲ್ಲದೆ ಕುಟುಂಬದ ನಿರ್ವಹಣೆಗೆ ಕಷ್ಟಕರವಾಗಿದೆ. ನೌಕರರು ಈಗಾಗಲೇ ಸಾಲದ ಸುಳಿಗೆ ಸಿಲುಕಿದ್ದಾರೆ. ನ್ಯಾಯಯುತವಾಗಿ ಬರಬೇಕಾದ ವೇತನ ನೀಡುವಂತೆ ಕೇಳಿದರೆ, ಯಾರೂ ಇದಕ್ಕೆ ಸ್ಪಂದಿಸುತ್ತಿಲ್ಲ’ ಎಂದು ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ವಿ.ಶಿವಶಂಕರ್ ದೂರಿದ್ದಾರೆ.</p>.<p>ಜಿಲ್ಲಾ ಶಸ್ತ್ರ ಚಿಕಿತ್ಸಕರು, ಸ್ಥಾನಿಕ ವೈದ್ಯಾಧಿಕಾರಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ‘ವೇತನ ಬಿಡುಗಡೆಗೊಳಿಸಿ’ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದರೂ ಸಹ ಆಸ್ಪತ್ರೆಯ ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ತಿಳಿಸಿದ್ದಾರೆ.</p>.<p>ವೈದ್ಯಾಧಿಕಾರಿ ಚೇತನ್ ಕ್ಷುಲ್ಲಕ ಕಾರಣ ನೀಡುತ್ತ, ಉದ್ಧಟತನ ತೋರುತ್ತಿದ್ದಾರೆ. ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ದಲಿತ, ಅಲ್ಪ ಸಂಖ್ಯಾತ ಸಮುದಾಯದ ನೌಕರರನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಕೆಲಸ ತೊರೆಯುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p>ಹಾಜರಾತಿ ಪುಸ್ತಕ ನೀಡದಿರುವುದು, ಹಾಜರಾತಿ ತಿದ್ದುವ ಮೂಲಕ ವೇತನ ಪಾವತಿಗೆ ಅಡ್ಡಿಯಾಗುತ್ತಿದ್ದಾರೆ. ಹಲವು ವರ್ಷಗಳಿಂದ ಇದೇ ಪರಿಪಾಟ ಮುಂದುವರಿಸಿಕೊಂಡು ಬಂದಿದ್ದಾರೆ. ದಲಿತರ ಬದುಕುವ ಹಕ್ಕು ಕಸಿದುಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಆಸ್ಪತ್ರೆಯಲ್ಲಿ ದುಡಿಯುತ್ತಿರುವ ದಲಿತ, ಅಲ್ಪ ಸಂಖ್ಯಾತ ನೌಕರರ ಹಿತರಕ್ಷಣೆ ದೃಷ್ಟಿಯಿಂದ ವೈದ್ಯಾಧಿಕಾರಿ ಚೇತನ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>