<p><strong>ತುಮಕೂರು</strong>: ತಾಲ್ಲೂಕಿನ ಗೂಳೂರು ಗಣಪತಿ ವಿಸರ್ಜನಾ ಮಹೋತ್ಸವ ಡಿ. 6ರಿಂದ 8ರ ವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ದಲಿತ ಸೇನೆಯ ಮುಖಂಡರು ಮನವಿ ಮಾಡಿದ್ದಾರೆ.</p>.<p>ದಲಿತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಗೂಳೂರು ಸಿದ್ದರಾಜು, ಮುಖಂಡರಾದ ಗೋವಿಂದರಾಜು, ಎ.ರಂಜನ್, ಗೂಳರಿವೆ ನಾಗರಾಜು, ರಂಗನಾಥ್ ನಾಯಕ್, ನಾಗೇಶ್, ಬಾಲಾಜಿ ಇತರರು ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.</p>.<p>ವಿಸರ್ಜನಾ ಮಹೋತ್ಸವದಲ್ಲಿ ಕೆಲ ಕಿಡಿಗೇಡಿಗಳು ಕುಡಿದು ಗಲಾಟೆ ಮಾಡುತ್ತಾರೆ. ಜಾತ್ರೆಗೆ ಬರುವ ಮಹಿಳೆಯರು, ಮಕ್ಕಳ ಜತೆಗೆ ಅಸಭ್ಯವಾಗಿ ವರ್ತಿಸುತ್ತಾರೆ. ಇದರಿಂದ ಹಬ್ಬದ ವಾತಾವರಣ ಹಾಳಾಗುತ್ತದೆ. ಉತ್ಸವ ನಡೆಯುವ ಮೂರು ದಿನ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಒತ್ತಾಯಿಸಿದರು.</p>.<p>ಗೂಳೂರು ಗ್ರಾಮದಲ್ಲಿ ಕಿರಾಣಿ ಅಂಗಡಿಗಳಲ್ಲಿ ಮದ್ಯ ಸಿಗುತ್ತಿದೆ. ವೆಂಕಟೇಶ್ವರ ದೇವಾಲಯದ ಮುಂಭಾಗದ ಅಂಗಡಿ, ದಲಿತರ ಕಾಲೊನಿಯ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ತಾಲ್ಲೂಕಿನ ಗೂಳೂರು ಗಣಪತಿ ವಿಸರ್ಜನಾ ಮಹೋತ್ಸವ ಡಿ. 6ರಿಂದ 8ರ ವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ದಲಿತ ಸೇನೆಯ ಮುಖಂಡರು ಮನವಿ ಮಾಡಿದ್ದಾರೆ.</p>.<p>ದಲಿತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಗೂಳೂರು ಸಿದ್ದರಾಜು, ಮುಖಂಡರಾದ ಗೋವಿಂದರಾಜು, ಎ.ರಂಜನ್, ಗೂಳರಿವೆ ನಾಗರಾಜು, ರಂಗನಾಥ್ ನಾಯಕ್, ನಾಗೇಶ್, ಬಾಲಾಜಿ ಇತರರು ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.</p>.<p>ವಿಸರ್ಜನಾ ಮಹೋತ್ಸವದಲ್ಲಿ ಕೆಲ ಕಿಡಿಗೇಡಿಗಳು ಕುಡಿದು ಗಲಾಟೆ ಮಾಡುತ್ತಾರೆ. ಜಾತ್ರೆಗೆ ಬರುವ ಮಹಿಳೆಯರು, ಮಕ್ಕಳ ಜತೆಗೆ ಅಸಭ್ಯವಾಗಿ ವರ್ತಿಸುತ್ತಾರೆ. ಇದರಿಂದ ಹಬ್ಬದ ವಾತಾವರಣ ಹಾಳಾಗುತ್ತದೆ. ಉತ್ಸವ ನಡೆಯುವ ಮೂರು ದಿನ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಒತ್ತಾಯಿಸಿದರು.</p>.<p>ಗೂಳೂರು ಗ್ರಾಮದಲ್ಲಿ ಕಿರಾಣಿ ಅಂಗಡಿಗಳಲ್ಲಿ ಮದ್ಯ ಸಿಗುತ್ತಿದೆ. ವೆಂಕಟೇಶ್ವರ ದೇವಾಲಯದ ಮುಂಭಾಗದ ಅಂಗಡಿ, ದಲಿತರ ಕಾಲೊನಿಯ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>