<p><strong>ತುಮಕೂರು:</strong> ಹಮಾಲಿ ಕಲ್ಯಾಣ ಮಂಡಳಿ ರಚನೆ, ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಹಮಾಲಿ ಕಾರ್ಮಿಕರ ಫೆಡರೇಷನ್ ಸಿಐಟಿಯು ನೇತೃತ್ವದಲ್ಲಿ ಹಮಾಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.</p>.<p>ಹಮಾಲಿ ಕಾರ್ಮಿಕ ಸಂಘಟನೆ ಮುಖಂಡ ನಾಗರಾಜ, ‘ಹಮಾಲಿ ಕಾರ್ಮಿಕರಿಗೆ ಹಣಕಾಸಿನ ನೆರವು ನೀಡುವ ಯೋಜನೆ ಜಾರಿಗೊಳಿಸಬೇಕು. ಹಣಕಾಸು ಸಂಪನ್ಮೂಲ ಕ್ರೋಢಿಕರಿಸುವ ಯೋಜನೆ ರೂಪಿಸಬೇಕು. ಸಾಮಾಜಿಕ ಭದ್ರತೆ ಒದಗಿಸಬೇಕು. ಹಮಾಲಿ ಕಲ್ಯಾಣ ಮಂಡಳಿ ರಚನೆಗೆ ₹500 ಕೋಟಿ ಮೀಸಲಿಡಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡ ರವಿಚಂದ್ರ, ‘ಎಪಿಎಂಸಿಯಲ್ಲಿ ಕೆಲಸ ಮಾಡಿ ನಿವೃತ್ತರಾದವರಿಗೆ ಕನಿಷ್ಠ ₹1 ಲಕ್ಷ ಇಡಿಗಂಟು ನೀಡಬೇಕು. ಹಮಾಲರಿಗೆ ಕಾರ್ಮಿಕರ ಭವಿಷ್ಯನಿಧಿ, ಪಿಂಚಣಿ ಹಾಗೂ ವಸತಿ ಯೋಜನೆಯ ನೆರವು ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ‘ಹಮಾಲರಿಗೆ ವೈದ್ಯಕೀಯ ಮರುಪಾವತಿ ಯೋಜನೆ ಮುಂದುವರಿಸಬೇಕು. ಸಮವಸ್ತ್ರ ವಿತರಣೆಗೆ ಕ್ರಮ ವಹಿಸಬೇಕು. ಕಾರ್ಮಿಕ ಕಾನೂನು ಜಾರಿಗೊಳಿಸಬೇಕು. ಕನಿಷ್ಠ ವೇತನ ನೀಡಬೇಕು’ ಎಂದರು.</p>.<p>ಮುಖಂಡರಾದ ಸಿದ್ದರಾಜು, ರಾಬಿನ್ಸನ್, ಲಕ್ಷ್ಮಿಕಾಂತ, ನಾಗೆಂದ್ರ, ಗೋಪಾಲ್ ಇತರರು ಪಾಲ್ಗೊಂಡಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಹಮಾಲಿ ಕಲ್ಯಾಣ ಮಂಡಳಿ ರಚನೆ, ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಹಮಾಲಿ ಕಾರ್ಮಿಕರ ಫೆಡರೇಷನ್ ಸಿಐಟಿಯು ನೇತೃತ್ವದಲ್ಲಿ ಹಮಾಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.</p>.<p>ಹಮಾಲಿ ಕಾರ್ಮಿಕ ಸಂಘಟನೆ ಮುಖಂಡ ನಾಗರಾಜ, ‘ಹಮಾಲಿ ಕಾರ್ಮಿಕರಿಗೆ ಹಣಕಾಸಿನ ನೆರವು ನೀಡುವ ಯೋಜನೆ ಜಾರಿಗೊಳಿಸಬೇಕು. ಹಣಕಾಸು ಸಂಪನ್ಮೂಲ ಕ್ರೋಢಿಕರಿಸುವ ಯೋಜನೆ ರೂಪಿಸಬೇಕು. ಸಾಮಾಜಿಕ ಭದ್ರತೆ ಒದಗಿಸಬೇಕು. ಹಮಾಲಿ ಕಲ್ಯಾಣ ಮಂಡಳಿ ರಚನೆಗೆ ₹500 ಕೋಟಿ ಮೀಸಲಿಡಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡ ರವಿಚಂದ್ರ, ‘ಎಪಿಎಂಸಿಯಲ್ಲಿ ಕೆಲಸ ಮಾಡಿ ನಿವೃತ್ತರಾದವರಿಗೆ ಕನಿಷ್ಠ ₹1 ಲಕ್ಷ ಇಡಿಗಂಟು ನೀಡಬೇಕು. ಹಮಾಲರಿಗೆ ಕಾರ್ಮಿಕರ ಭವಿಷ್ಯನಿಧಿ, ಪಿಂಚಣಿ ಹಾಗೂ ವಸತಿ ಯೋಜನೆಯ ನೆರವು ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ‘ಹಮಾಲರಿಗೆ ವೈದ್ಯಕೀಯ ಮರುಪಾವತಿ ಯೋಜನೆ ಮುಂದುವರಿಸಬೇಕು. ಸಮವಸ್ತ್ರ ವಿತರಣೆಗೆ ಕ್ರಮ ವಹಿಸಬೇಕು. ಕಾರ್ಮಿಕ ಕಾನೂನು ಜಾರಿಗೊಳಿಸಬೇಕು. ಕನಿಷ್ಠ ವೇತನ ನೀಡಬೇಕು’ ಎಂದರು.</p>.<p>ಮುಖಂಡರಾದ ಸಿದ್ದರಾಜು, ರಾಬಿನ್ಸನ್, ಲಕ್ಷ್ಮಿಕಾಂತ, ನಾಗೆಂದ್ರ, ಗೋಪಾಲ್ ಇತರರು ಪಾಲ್ಗೊಂಡಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>