ಹೆಚ್ಚಿದ ಬಿಸಿಲು ಜನರ ಆರೋಗ್ಯದ ಮೇಲೆ ಸಾಕಷ್ಟು ಅಡ್ಡ ಪರಿಣಾಮ ಉಂಟು ಮಾಡುತ್ತಿದೆ. ಬೆಳಗ್ಗೆ 10 ಗಂಟೆಯ ನಂತರ ಕೆಲಸ ಮಾಡಲು ಆಗದಂತಹ ಪರಿಸ್ಥಿತಿ ಇದೆ. ಮಹಾನಗರ, ನಗರ, ಪಟ್ಟಣಗಳಲ್ಲಿ ಬೆಳಗ್ಗೆ 10 ಗಂಟೆಯ ತನಕ ಮಾತ್ರ ಕೆಲಸ ಮಾಡಲು ಸಮಯ ನಿಗದಿ ಪಡಿಸಬೇಕು ಎಂದು ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಪ್ರಧಾನ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಒತ್ತಾಯಿಸಿದ್ದಾರೆ.