ಇಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸುರಕ್ಷಾ ಸಲಕರಣೆಗಳನ್ನು ನೀಡಿಲ್ಲ. ಈ ಬಗ್ಗೆ ಮೂಲ ಮಾಲೀಕರು ಗಮನಹರಿಸಬೇಕು. ಕೆಎಂಎಫ್ ಆಡಳಿತ ಮಂಡಳಿ ₹ 5 ಲಕ್ಷ ಹಾಗೂ ಗುತ್ತಿಗೆದಾರರು ₹ 5 ಲಕ್ಷ ಪರಿಹಾರ ನೀಡಲು ಒಪ್ಪಿದ್ದಾರೆ. ಸೋಮವಾರ ಪರಿಹಾರ ನೀಡಲಿದ್ದಾರೆ ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ ತಿಳಿಸಿದ್ದಾರೆ.