<p><strong>ತಿಪಟೂರು</strong>: ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆರೆಗಳಿಗೆ ಹೇಮಾವತಿ ನೀರು ಹರಿಸುವ ಯೋಜನೆಯ ಕಾಮಗಾರಿಗೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಪರಿಹಾರದ ಹಣ ನೀಡದ ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮತ್ತು ಪರಿಹಾರಕ್ಕೆ ಆಗ್ರಹಿಸಿ ರೈತರು ಕಾಮಗಾರಿಯ ಸ್ಥಳದಲ್ಲಿಯೇ ಅನಿರ್ದಿಷ್ಟಾವಧಿ ಧರಣಿಗೆ ಮುಂದಾಗಿದ್ದಾರೆ.</p>.<p>ಹಾಲ್ಕುರಿಕೆ ಕೆರೆ ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 26 ಕೆರೆಗಳಿಗೆ ನೀರು ತುಂಬಿಸುವ ನಾಲಾ ಕಾಮಗಾರಿಯನ್ನು ತಿಗಡರಹಳ್ಳಿ, ಲಕ್ಮಗೊಂಡನಹಳ್ಳಿ ಗ್ರಾಮದ ಬಳಿ ರೈತರು ಭಾನುವಾರ ತಡೆದಿದ್ದರು.</p>.<p>ಗುತ್ತಿಗೆದಾರರು ಪ್ರಭಾವಿಗಳ ಬೆಂಬಲದಲ್ಲಿ ಮತ್ತೆ ಕಾಮಗಾರಿ ಪ್ರಾರಂಭಿಸುತ್ತಾರೆ ಎಂದು ಕಾಮಗಾರಿಯ ಸ್ಥಳದಲ್ಲಿ ಧರಣಿಗೆ ಮುಂದಾಗಿದ್ದಾರೆ.</p>.<p>ರೈತ ಚಂದನ್ ಮಾತನಾಡಿ, 2015ರಲ್ಲಿ ಜೆ.ಸಿ.ಮಾಧುಸ್ವಾಮಿ ಅವರು ಪೂರ್ಣ ಪರಿಹಾರದ ಹಣ ನೀಡುವವರೆಗೂ ಕಾಮಗಾರಿಗೆ ಅವಕಾಶ ಕೊಡಬೇಡಿ ಎಂದಿದ್ದರು. ಈಗ ಜಮೀನು ಬಿಡುವಂತೆ ಹೇಳುತ್ತಿದ್ದಾರೆ. ಪ್ರಾಣ ಬಿಟ್ಟರೂ ಸರಿ ಪರಿಹಾರ ದೊರೆಯುವವರೆಗೂ ಜಮೀನು ಬಿಡುವುದಿಲ್ಲ ಎಂದರು.</p>.<p>ಹಸಿರು ಸೇನೆ ತಾಲ್ಲೂಕು ಅಧ್ಯಕ್ಷದೇವರಾಜು, ರೈತ ಸಂಘದ ಶಂಕರಣ್ಣ, ಸೌಭಾಗ್ಯ, ರೈತರಾದ ಗಂಗಾಧರ್, ಶಂಕರಪ್ಪ, ಉಮೇಶ್, ಕಂಚಿರಾಯ, ದಿನೇಶ್, ಮಹಲಿಂಗಯ್ಯ, ಶಶಿಧರ್, ಜೀವನ್, ಬೀರೇಶ್, ಜಯಾನಂದ್ ಅರುಣ್ಕುಮಾರ್ ಪ್ರತಿಭಟನೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆರೆಗಳಿಗೆ ಹೇಮಾವತಿ ನೀರು ಹರಿಸುವ ಯೋಜನೆಯ ಕಾಮಗಾರಿಗೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಪರಿಹಾರದ ಹಣ ನೀಡದ ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮತ್ತು ಪರಿಹಾರಕ್ಕೆ ಆಗ್ರಹಿಸಿ ರೈತರು ಕಾಮಗಾರಿಯ ಸ್ಥಳದಲ್ಲಿಯೇ ಅನಿರ್ದಿಷ್ಟಾವಧಿ ಧರಣಿಗೆ ಮುಂದಾಗಿದ್ದಾರೆ.</p>.<p>ಹಾಲ್ಕುರಿಕೆ ಕೆರೆ ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 26 ಕೆರೆಗಳಿಗೆ ನೀರು ತುಂಬಿಸುವ ನಾಲಾ ಕಾಮಗಾರಿಯನ್ನು ತಿಗಡರಹಳ್ಳಿ, ಲಕ್ಮಗೊಂಡನಹಳ್ಳಿ ಗ್ರಾಮದ ಬಳಿ ರೈತರು ಭಾನುವಾರ ತಡೆದಿದ್ದರು.</p>.<p>ಗುತ್ತಿಗೆದಾರರು ಪ್ರಭಾವಿಗಳ ಬೆಂಬಲದಲ್ಲಿ ಮತ್ತೆ ಕಾಮಗಾರಿ ಪ್ರಾರಂಭಿಸುತ್ತಾರೆ ಎಂದು ಕಾಮಗಾರಿಯ ಸ್ಥಳದಲ್ಲಿ ಧರಣಿಗೆ ಮುಂದಾಗಿದ್ದಾರೆ.</p>.<p>ರೈತ ಚಂದನ್ ಮಾತನಾಡಿ, 2015ರಲ್ಲಿ ಜೆ.ಸಿ.ಮಾಧುಸ್ವಾಮಿ ಅವರು ಪೂರ್ಣ ಪರಿಹಾರದ ಹಣ ನೀಡುವವರೆಗೂ ಕಾಮಗಾರಿಗೆ ಅವಕಾಶ ಕೊಡಬೇಡಿ ಎಂದಿದ್ದರು. ಈಗ ಜಮೀನು ಬಿಡುವಂತೆ ಹೇಳುತ್ತಿದ್ದಾರೆ. ಪ್ರಾಣ ಬಿಟ್ಟರೂ ಸರಿ ಪರಿಹಾರ ದೊರೆಯುವವರೆಗೂ ಜಮೀನು ಬಿಡುವುದಿಲ್ಲ ಎಂದರು.</p>.<p>ಹಸಿರು ಸೇನೆ ತಾಲ್ಲೂಕು ಅಧ್ಯಕ್ಷದೇವರಾಜು, ರೈತ ಸಂಘದ ಶಂಕರಣ್ಣ, ಸೌಭಾಗ್ಯ, ರೈತರಾದ ಗಂಗಾಧರ್, ಶಂಕರಪ್ಪ, ಉಮೇಶ್, ಕಂಚಿರಾಯ, ದಿನೇಶ್, ಮಹಲಿಂಗಯ್ಯ, ಶಶಿಧರ್, ಜೀವನ್, ಬೀರೇಶ್, ಜಯಾನಂದ್ ಅರುಣ್ಕುಮಾರ್ ಪ್ರತಿಭಟನೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>