<p><strong>ಕುಣಿಗಲ್:</strong> ಪಟ್ಟಣದ ಮದ್ದೂರು ರಸ್ತೆಯಲ್ಲಿರುವ ರೈಲ್ವೆ ಮೇಲ್ಸೇತುವೆ ಗುಂಡಿಗಳಿಂದ ಆವೃತ್ತವಾಗಿ ಮೂರು ವರ್ಷ ಕಳೆದಿದ್ದರೂ, ದುರಸ್ತಿಗೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ರೈತ ಹಿತರಕ್ಷಣ ವೇದಿಕೆ ಪದಾಧಿಕಾರಿಗಳು ಜನಪರ ಸಂಘಟನೆಗಳೊಂದಿಗೆ ಸೇರಿ ಮೇಲ್ಸೇತುವೆ ವಾಹನಗಳ ಸಂಚಾರ ತಡೆದು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ವೇದಿಕೆ ಅಧ್ಯಕ್ಷ ಕರಿಗೌಡ ಮಾತನಾಡಿ, ರಾಜ್ಯ ಹೆದ್ದಾರಿ 33ರ ರೈಲ್ವೆ ಮೇಲ್ಸೇತುವೆ ಸಕಾಲದಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಗುಂಡಿ ಬಿದ್ದಿವೆ. ರಸ್ತೆಗೆ ಹಾಕಲಾಗಿದ್ದ ಕಬ್ಬಿಣದ ಸರಳು ಕಿತ್ತು, ರಸ್ತೆ ಮೇಲ್ಭಾಗದಲ್ಲಿ ಬಂದಿರುವುದಿಂದ ಮೂರು ವರ್ಷಗಳಿಂದ ನೂರಾರು ಅಪಘಾತಗಳು ಸಂಭವಿಸುತ್ತಿವೆ ಎಂದು ದೂರಿದರು.</p>.<p>ಈ ಬಗ್ಗೆ ರೈಲ್ವೆ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ, ಪುರಸಭೆ ಅಧಿಕಾರಿಗಳನ್ನು ಸಂಪರ್ಕಿಸಿದರೆ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎನ್ನುತ್ತಾರೆ. ಟೋಲ್ ಸಂಗ್ರಹ ಮಾಡುತ್ತಿರುವ ಕೆಆರ್ಡಿಸಿಎಲ್ಗೆ ಮನವಿ ಮಾಡಲಾಗಿದೆ. ಶಾಸಕ, ಸಂಸದರಿಗೂ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ ಎಂದರು.</p>.<p>ಪ್ರತಿಭಟನೆ ಪ್ರಾರಂಭವಾಗುತ್ತಿದ್ದಂತೆ ರಾಜ್ಯ ಹೆದ್ದಾರಿ 33ರ ತುಮಕೂರು- ಮದ್ದೂರು ರಸ್ತೆಯಲ್ಲಿ ವಾಹನಗಳು ನಿಂತು ಸಂಚಾರಕ್ಕೆ ಅಡ್ಡಿಯಾಯಿತು. ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿದರು.</p>.<p>ಸ್ಥಳಕ್ಕೆ ಬಂದ ಲೋಕೋಪಯೋಗಿ ಇಲಾಖೆ ಎಇಇ ನಾಗರಾಜು, ‘ದುರಸ್ತಿಕಾರ್ಯ ನಮ್ಮ ವ್ಯಾಪ್ತಿಗೆ ಬರುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ಕೆ–ಶಿಫ್ ಅಧಿಕಾರಿ ತನುಜ ಮಾತನಾಡಿ, ಕೆಲ ದಿನಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದು, ಸದ್ಯಕ್ಕೆ ತಾತ್ಕಾಲಿಕವಾಗಿ ದುರಸ್ತಿ ಮಾಡಿ, ನಂತರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕ್ರಮತೆಗೆದುಕೊಳ್ಳುವುದಾಗಿ ತಿಳಿಸಿದರು.</p>.<p>ದುರಸ್ತಿ ಪ್ರಾರಂಭಿಸಿದ ನಂತರ ಪ್ರತಿಭಟನೆ ಹಿಂಪಡೆದರು.</p>.<p>ಅಮ್ ಆದ್ಮಿ ಪಕ್ಷದ ಅಧ್ಯಕ್ಷ ಜಯರಾಮಯ್ಯ, ದಲಿತ ಹಕ್ಕುಗಳ ಸಮಿತಿ ರಾಜುವೆಂಕಟಪ್ಪ, ಕೆಆರ್ಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜು, ಶ್ರಮಜೀವಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಕೃಷ್ಣರಾಜು, ವೇದಿಕೆಯ ಪದಾಧಿಕಾರಿಗಳಾದ ಸಿಂಗ್ರಿಗೌಡ, ಶಿವಲಿಂಗಯ್ಯ, ರಾಗಿರಂಗಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ಪಟ್ಟಣದ ಮದ್ದೂರು ರಸ್ತೆಯಲ್ಲಿರುವ ರೈಲ್ವೆ ಮೇಲ್ಸೇತುವೆ ಗುಂಡಿಗಳಿಂದ ಆವೃತ್ತವಾಗಿ ಮೂರು ವರ್ಷ ಕಳೆದಿದ್ದರೂ, ದುರಸ್ತಿಗೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ರೈತ ಹಿತರಕ್ಷಣ ವೇದಿಕೆ ಪದಾಧಿಕಾರಿಗಳು ಜನಪರ ಸಂಘಟನೆಗಳೊಂದಿಗೆ ಸೇರಿ ಮೇಲ್ಸೇತುವೆ ವಾಹನಗಳ ಸಂಚಾರ ತಡೆದು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ವೇದಿಕೆ ಅಧ್ಯಕ್ಷ ಕರಿಗೌಡ ಮಾತನಾಡಿ, ರಾಜ್ಯ ಹೆದ್ದಾರಿ 33ರ ರೈಲ್ವೆ ಮೇಲ್ಸೇತುವೆ ಸಕಾಲದಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಗುಂಡಿ ಬಿದ್ದಿವೆ. ರಸ್ತೆಗೆ ಹಾಕಲಾಗಿದ್ದ ಕಬ್ಬಿಣದ ಸರಳು ಕಿತ್ತು, ರಸ್ತೆ ಮೇಲ್ಭಾಗದಲ್ಲಿ ಬಂದಿರುವುದಿಂದ ಮೂರು ವರ್ಷಗಳಿಂದ ನೂರಾರು ಅಪಘಾತಗಳು ಸಂಭವಿಸುತ್ತಿವೆ ಎಂದು ದೂರಿದರು.</p>.<p>ಈ ಬಗ್ಗೆ ರೈಲ್ವೆ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ, ಪುರಸಭೆ ಅಧಿಕಾರಿಗಳನ್ನು ಸಂಪರ್ಕಿಸಿದರೆ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎನ್ನುತ್ತಾರೆ. ಟೋಲ್ ಸಂಗ್ರಹ ಮಾಡುತ್ತಿರುವ ಕೆಆರ್ಡಿಸಿಎಲ್ಗೆ ಮನವಿ ಮಾಡಲಾಗಿದೆ. ಶಾಸಕ, ಸಂಸದರಿಗೂ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ ಎಂದರು.</p>.<p>ಪ್ರತಿಭಟನೆ ಪ್ರಾರಂಭವಾಗುತ್ತಿದ್ದಂತೆ ರಾಜ್ಯ ಹೆದ್ದಾರಿ 33ರ ತುಮಕೂರು- ಮದ್ದೂರು ರಸ್ತೆಯಲ್ಲಿ ವಾಹನಗಳು ನಿಂತು ಸಂಚಾರಕ್ಕೆ ಅಡ್ಡಿಯಾಯಿತು. ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿದರು.</p>.<p>ಸ್ಥಳಕ್ಕೆ ಬಂದ ಲೋಕೋಪಯೋಗಿ ಇಲಾಖೆ ಎಇಇ ನಾಗರಾಜು, ‘ದುರಸ್ತಿಕಾರ್ಯ ನಮ್ಮ ವ್ಯಾಪ್ತಿಗೆ ಬರುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ಕೆ–ಶಿಫ್ ಅಧಿಕಾರಿ ತನುಜ ಮಾತನಾಡಿ, ಕೆಲ ದಿನಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದು, ಸದ್ಯಕ್ಕೆ ತಾತ್ಕಾಲಿಕವಾಗಿ ದುರಸ್ತಿ ಮಾಡಿ, ನಂತರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕ್ರಮತೆಗೆದುಕೊಳ್ಳುವುದಾಗಿ ತಿಳಿಸಿದರು.</p>.<p>ದುರಸ್ತಿ ಪ್ರಾರಂಭಿಸಿದ ನಂತರ ಪ್ರತಿಭಟನೆ ಹಿಂಪಡೆದರು.</p>.<p>ಅಮ್ ಆದ್ಮಿ ಪಕ್ಷದ ಅಧ್ಯಕ್ಷ ಜಯರಾಮಯ್ಯ, ದಲಿತ ಹಕ್ಕುಗಳ ಸಮಿತಿ ರಾಜುವೆಂಕಟಪ್ಪ, ಕೆಆರ್ಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜು, ಶ್ರಮಜೀವಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಕೃಷ್ಣರಾಜು, ವೇದಿಕೆಯ ಪದಾಧಿಕಾರಿಗಳಾದ ಸಿಂಗ್ರಿಗೌಡ, ಶಿವಲಿಂಗಯ್ಯ, ರಾಗಿರಂಗಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>