<p><strong>ತುಮಕೂರು:</strong> ನಗರದ ಜನರ ಶ್ವಾಸಕೋಶದಂತಿರುವ ತಾಲ್ಲೂಕಿನ ದೇವರಾಯನದುರ್ಗದಲ್ಲಿ ರೋಪ್ವೇ ನಿರ್ಮಾಣಕ್ಕೆ ಗ್ರಾಮಾಂತರ ಶಾಸಕ ಬಿ.ಸುರೇಶ್ಗೌಡ ಮುಂದಾಗಿದ್ದಾರೆ.</p>.<p>ದೇವರಾಯನದುರ್ಗದಲ್ಲಿ ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳ ಜತೆ ಶಾಸಕರು ಚರ್ಚೆ ನಡೆಸಿದರು. ರೋಪ್ವೇ ನಿರ್ಮಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ರೋಪ್ವೇ ನಿರ್ಮಾಣಕ್ಕೆ ಇಲಾಖೆ ಅಧಿಕಾರಿಗಳು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ₹61 ಕೋಟಿಯಿಂದ ₹150 ಕೋಟಿ ವೆಚ್ಚವಾಗಬಹುದು. ಗಣಿ ಇಲಾಖೆಯ ಪರಿಸರ ಪುನರ್ ನಿರ್ಮಾಣಕ್ಕಾಗಿ ಲಭ್ಯವಿರುವ ಅನುದಾನದಲ್ಲಿ ರೋಪ್ವೇ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ನಾಮದ ಚಿಲುಮೆ ಸುತ್ತಮುತ್ತಲಿನ ಪರಿಸರದಲ್ಲಿ ಪೂರ್ಣ ಪ್ರಮಾಣದ ಪ್ರಾಣಿ ಸಂಗ್ರಹಾಲಯ ಸ್ಥಾಪಿಸಲೂ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.</p>.<p>ದೇವರಾಯನದುರ್ಗ ಸಮುದ್ರ ಮಟ್ಟದಿಂದ 3,904 ಅಡಿ ಎತ್ತರದಲ್ಲಿದ್ದು, 4,117 ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯ ವ್ಯಾಪಿಸಿಕೊಂಡಿದೆ. ಇದು ಸಂರಕ್ಷಿತ ಅರಣ್ಯ ಪ್ರದೇಶವಾಗಿದ್ದು, 1,200 ಅಡಿ ಎತ್ತರದಲ್ಲಿ ರೋಪ್ವೇ ನಿರ್ಮಿಸಬೇಕಿದೆ. ಮೋನೋ ಕೇಬಲ್ ಇರಬೇಕೆ ಅಥವಾ ಎರಡು-ಮೂರು ಕೇಬಲ್ ಇರಬೇಕೆ ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ತಾಂತ್ರಿಕ ತಜ್ಞರು ನಿರ್ಧರಿಸಲಿದ್ದಾರೆ ಎಂದು ವಿವರಿಸಿದ್ದಾರೆ.</p>.<p>ದಿನನಿತ್ಯ ಸಾವಿರಾರು ಮಂದಿ, ವರ್ಷಕ್ಕೆ 4 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ರೋಪ್ವೇ ಬಳಕೆಯಿಂದ ವಾರ್ಷಿಕ ₹15 ಕೋಟಿ ಹಣ ಸಂಗ್ರಹವಾಗಬಹುದು ಎಂದರು.</p>.<p>ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪವಿತ್ರ, ವಲಯ ಅರಣ್ಯಾಧಿಕಾರಿ ನಮಿತಾ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರದ ಜನರ ಶ್ವಾಸಕೋಶದಂತಿರುವ ತಾಲ್ಲೂಕಿನ ದೇವರಾಯನದುರ್ಗದಲ್ಲಿ ರೋಪ್ವೇ ನಿರ್ಮಾಣಕ್ಕೆ ಗ್ರಾಮಾಂತರ ಶಾಸಕ ಬಿ.ಸುರೇಶ್ಗೌಡ ಮುಂದಾಗಿದ್ದಾರೆ.</p>.<p>ದೇವರಾಯನದುರ್ಗದಲ್ಲಿ ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳ ಜತೆ ಶಾಸಕರು ಚರ್ಚೆ ನಡೆಸಿದರು. ರೋಪ್ವೇ ನಿರ್ಮಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ರೋಪ್ವೇ ನಿರ್ಮಾಣಕ್ಕೆ ಇಲಾಖೆ ಅಧಿಕಾರಿಗಳು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ₹61 ಕೋಟಿಯಿಂದ ₹150 ಕೋಟಿ ವೆಚ್ಚವಾಗಬಹುದು. ಗಣಿ ಇಲಾಖೆಯ ಪರಿಸರ ಪುನರ್ ನಿರ್ಮಾಣಕ್ಕಾಗಿ ಲಭ್ಯವಿರುವ ಅನುದಾನದಲ್ಲಿ ರೋಪ್ವೇ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ನಾಮದ ಚಿಲುಮೆ ಸುತ್ತಮುತ್ತಲಿನ ಪರಿಸರದಲ್ಲಿ ಪೂರ್ಣ ಪ್ರಮಾಣದ ಪ್ರಾಣಿ ಸಂಗ್ರಹಾಲಯ ಸ್ಥಾಪಿಸಲೂ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.</p>.<p>ದೇವರಾಯನದುರ್ಗ ಸಮುದ್ರ ಮಟ್ಟದಿಂದ 3,904 ಅಡಿ ಎತ್ತರದಲ್ಲಿದ್ದು, 4,117 ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯ ವ್ಯಾಪಿಸಿಕೊಂಡಿದೆ. ಇದು ಸಂರಕ್ಷಿತ ಅರಣ್ಯ ಪ್ರದೇಶವಾಗಿದ್ದು, 1,200 ಅಡಿ ಎತ್ತರದಲ್ಲಿ ರೋಪ್ವೇ ನಿರ್ಮಿಸಬೇಕಿದೆ. ಮೋನೋ ಕೇಬಲ್ ಇರಬೇಕೆ ಅಥವಾ ಎರಡು-ಮೂರು ಕೇಬಲ್ ಇರಬೇಕೆ ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ತಾಂತ್ರಿಕ ತಜ್ಞರು ನಿರ್ಧರಿಸಲಿದ್ದಾರೆ ಎಂದು ವಿವರಿಸಿದ್ದಾರೆ.</p>.<p>ದಿನನಿತ್ಯ ಸಾವಿರಾರು ಮಂದಿ, ವರ್ಷಕ್ಕೆ 4 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ರೋಪ್ವೇ ಬಳಕೆಯಿಂದ ವಾರ್ಷಿಕ ₹15 ಕೋಟಿ ಹಣ ಸಂಗ್ರಹವಾಗಬಹುದು ಎಂದರು.</p>.<p>ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪವಿತ್ರ, ವಲಯ ಅರಣ್ಯಾಧಿಕಾರಿ ನಮಿತಾ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>