<p><strong>ತುಮಕೂರು:</strong> ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗುಪ್ತಚರ ವಿಭಾಗದ ಎಡಿಜಿಪಿಯನ್ನು ಅಮಾನತು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಆಗ್ರಹಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬೆಂಗಳೂರು ನಗರ ಪೊಲೀಸ್ ಕಮಿಷನರ್, ಡಿಸಿಪಿ, ಎಸಿಪಿ ಅಮಾನತು ಮಾಡಲಾಗಿದೆ. ಸರ್ಕಾರದ ಕಡೆಯಿಂದ ತಪ್ಪಾಗಿದೆ. ಆದರೆ ಪ್ರಮುಖವಾಗಿ ಗುಪ್ತಚರ ವಿಭಾಗದಿಂದ ಲೋಪ ಕಂಡುಬಂದಿದ್ದು, ಮೊದಲು ಎಡಿಜಿಪಿ ಅಮಾನತು ಮಾಡಬೇಕಿತ್ತು’ ಎಂದು ಹೇಳಿದರು.</p>.<p>ಕೇವಲ ಪೊಲೀಸ್ ಕಮಿಷನರ್ ಅಮಾನತು ಮಾಡುವುದರಿಂದ ನ್ಯಾಯ ಸಿಗುವುದಿಲ್ಲ. ಗುಪ್ತಚರ ವಿಭಾಗದ ಎಡಿಜಿಪಿಯನ್ನು ಅಮಾನತು ಮಾಡಿ, ಅವರ ವಿರುದ್ಧವೂ ತನಿಖೆ ನಡೆಸಿದ್ದರೆ ಅದಕ್ಕೊಂದು ಬೆಲೆ ಇರುತಿತ್ತು. ಈಗಲೂ ಅಂತಹ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ನಿರ್ಮಾಣಕ್ಕೆ ವಿರೋಧವಿದೆ. ಕೇವಲ ಕುಣಿಗಲ್ ಭಾಗಕ್ಕೆ ಮಾತ್ರ ನೀರು ಎಂದು ಹೇಳುತ್ತಿದ್ದಾರೆ. ಕೊರಟಗೆರೆ, ಮಧುಗಿರಿ ಭಾಗಕ್ಕೆ ಎಷ್ಟು ನೀರು ಹರಿಸಲಾಗಿದೆ ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ ಎಂದರು.</p>.<p>ಸಚಿವ ಕೆ.ಎನ್.ರಾಜಣ್ಣ ಅಭಿನಂದನಾ ಸಮಾರಂಭವನ್ನು ಜೂನ್ 21ರಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತರ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗುಪ್ತಚರ ವಿಭಾಗದ ಎಡಿಜಿಪಿಯನ್ನು ಅಮಾನತು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಆಗ್ರಹಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬೆಂಗಳೂರು ನಗರ ಪೊಲೀಸ್ ಕಮಿಷನರ್, ಡಿಸಿಪಿ, ಎಸಿಪಿ ಅಮಾನತು ಮಾಡಲಾಗಿದೆ. ಸರ್ಕಾರದ ಕಡೆಯಿಂದ ತಪ್ಪಾಗಿದೆ. ಆದರೆ ಪ್ರಮುಖವಾಗಿ ಗುಪ್ತಚರ ವಿಭಾಗದಿಂದ ಲೋಪ ಕಂಡುಬಂದಿದ್ದು, ಮೊದಲು ಎಡಿಜಿಪಿ ಅಮಾನತು ಮಾಡಬೇಕಿತ್ತು’ ಎಂದು ಹೇಳಿದರು.</p>.<p>ಕೇವಲ ಪೊಲೀಸ್ ಕಮಿಷನರ್ ಅಮಾನತು ಮಾಡುವುದರಿಂದ ನ್ಯಾಯ ಸಿಗುವುದಿಲ್ಲ. ಗುಪ್ತಚರ ವಿಭಾಗದ ಎಡಿಜಿಪಿಯನ್ನು ಅಮಾನತು ಮಾಡಿ, ಅವರ ವಿರುದ್ಧವೂ ತನಿಖೆ ನಡೆಸಿದ್ದರೆ ಅದಕ್ಕೊಂದು ಬೆಲೆ ಇರುತಿತ್ತು. ಈಗಲೂ ಅಂತಹ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ನಿರ್ಮಾಣಕ್ಕೆ ವಿರೋಧವಿದೆ. ಕೇವಲ ಕುಣಿಗಲ್ ಭಾಗಕ್ಕೆ ಮಾತ್ರ ನೀರು ಎಂದು ಹೇಳುತ್ತಿದ್ದಾರೆ. ಕೊರಟಗೆರೆ, ಮಧುಗಿರಿ ಭಾಗಕ್ಕೆ ಎಷ್ಟು ನೀರು ಹರಿಸಲಾಗಿದೆ ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ ಎಂದರು.</p>.<p>ಸಚಿವ ಕೆ.ಎನ್.ರಾಜಣ್ಣ ಅಭಿನಂದನಾ ಸಮಾರಂಭವನ್ನು ಜೂನ್ 21ರಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತರ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>