ಸಂಜೆ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದ್ದು, ಆಂದ್ರ ಗಡಿಭಾಗದ ಹಳ್ಳಿಗಳಲ್ಲಿರುವ ಮದ್ಯಪ್ರಿಯರು ಗಡಿದಾಟಿ ಬರುತ್ತಿದ್ದಾರೆ. ಇದಕ್ಕೆ ಅಬಕಾರಿ ಇಲಾಖೆಯ ಅಧಿಕಾರಿಗಳು ಕಡಿವಾಣ ಹಾಕಬೇಕು ಎಂದು ಅಧ್ಯಕ್ಷರು ಒತ್ತಾಯಿಸಿದರು. ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಅಬಕಾರಿ ನಿರೀಕ್ಷಕಿ ಶ್ರೀಲತಾ ತಿಳಿಸಿದರು. ಉಪಾಧ್ಯಕ್ಷ ಲಕ್ಷ್ಮೀನ ರಸಪ್ಪ,ಆರೋಗ್ಯಾಧಿಕಾರಿ ಡಾ. ರಮೇಶಬಾಬು, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎ.ರಾಜು, ಇಒ ದೊಡ್ಡಸಿದ್ದಪ್ಪ ಇದ್ದರು.