<p><strong>ತುಮಕೂರು: </strong>ಬಾಲಿವುಡ್ ನಟಿ ಕಂಗನಾ ರನೋತ್ ಟ್ವಿಟರ್ ಖಾತೆ ಸ್ಥಗಿತಗೊಳಿಸುವಂತೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಹೈಕೋರ್ಟ್ ವಕೀಲ ಹಾಗೂ ತಾಲ್ಲೂಕಿನ ಕದರೇನಹಳ್ಳಿ ತಾಂಡಾ ವಾಸಿ ಎಲ್.ರಮೇಶ್ ನಾಯಕ್ ಗುರುವಾರ ದೂರು ನೀಡಿದ್ದಾರೆ.</p>.<p>ಪಾಪ್ ತಾರೆ ರಿಯಾನಾ ಮತ್ತು ಕಂಗನಾ ಟ್ವಿಟ್ ಮತ್ತು ಮರುಟ್ವಿಟ್ ಬಗ್ಗೆ ಪ್ರಸ್ತಾಪಿಸಿರುವ ರಮೇಶ್ ನಾಯ್ಕ, ಕಂಗನಾ ಮತ್ತೆ, ಮತ್ತೆ ರೈತರನ್ನು ಭಯೋತ್ಪಾದಕರು ಎಂದು ನಿಂದಿಸುತ್ತಿದ್ದು ಅವರ ಟ್ವಿಟರ್ ಖಾತೆ ಸ್ಥಗಿತಗೊಳಿಸುವಂತೆ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ.</p>.<p>‘ಕಂಗಾನ ಟ್ವಿಟರ್ ನಿಯಮಗಳನ್ನು ಮೀರಿದ್ದರೆ ಕ್ರಮಕೈಗೊಳ್ಳಲಾಗುವುದು’ ಎಂದು ಸಚಿವಾಲಯದಿಂದ ಪ್ರತಿಕ್ರಿಯೆ ಕೂಡ ಬಂದಿದೆ.</p>.<p>ಈ ಹಿಂದೆ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ಟ್ವೀಟ್ ಮಾಡಿದ್ದ ವೇಳೆ ಅವರ ವಿರುದ್ಧ ದೂರು ದಾಖಲಿಸುವಂತೆರಮೇಶ್ ನಾಯಕ್ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯವು ಕ್ಯಾತ್ಸಂದ್ರ ಪೊಲೀಸರಿಗೆ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಬಾಲಿವುಡ್ ನಟಿ ಕಂಗನಾ ರನೋತ್ ಟ್ವಿಟರ್ ಖಾತೆ ಸ್ಥಗಿತಗೊಳಿಸುವಂತೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಹೈಕೋರ್ಟ್ ವಕೀಲ ಹಾಗೂ ತಾಲ್ಲೂಕಿನ ಕದರೇನಹಳ್ಳಿ ತಾಂಡಾ ವಾಸಿ ಎಲ್.ರಮೇಶ್ ನಾಯಕ್ ಗುರುವಾರ ದೂರು ನೀಡಿದ್ದಾರೆ.</p>.<p>ಪಾಪ್ ತಾರೆ ರಿಯಾನಾ ಮತ್ತು ಕಂಗನಾ ಟ್ವಿಟ್ ಮತ್ತು ಮರುಟ್ವಿಟ್ ಬಗ್ಗೆ ಪ್ರಸ್ತಾಪಿಸಿರುವ ರಮೇಶ್ ನಾಯ್ಕ, ಕಂಗನಾ ಮತ್ತೆ, ಮತ್ತೆ ರೈತರನ್ನು ಭಯೋತ್ಪಾದಕರು ಎಂದು ನಿಂದಿಸುತ್ತಿದ್ದು ಅವರ ಟ್ವಿಟರ್ ಖಾತೆ ಸ್ಥಗಿತಗೊಳಿಸುವಂತೆ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ.</p>.<p>‘ಕಂಗಾನ ಟ್ವಿಟರ್ ನಿಯಮಗಳನ್ನು ಮೀರಿದ್ದರೆ ಕ್ರಮಕೈಗೊಳ್ಳಲಾಗುವುದು’ ಎಂದು ಸಚಿವಾಲಯದಿಂದ ಪ್ರತಿಕ್ರಿಯೆ ಕೂಡ ಬಂದಿದೆ.</p>.<p>ಈ ಹಿಂದೆ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ಟ್ವೀಟ್ ಮಾಡಿದ್ದ ವೇಳೆ ಅವರ ವಿರುದ್ಧ ದೂರು ದಾಖಲಿಸುವಂತೆರಮೇಶ್ ನಾಯಕ್ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯವು ಕ್ಯಾತ್ಸಂದ್ರ ಪೊಲೀಸರಿಗೆ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>