<p><strong>ಕೊರಟಗೆರೆ:</strong> ಸಮುದಾಯ ಮುನ್ನೆಲೆಗೆ ಬರಬೇಕಾದರೆ ಆ ಸಮುದಾಯದ ಮಕ್ಕಳು ವಿದ್ಯಾವಂತರಾಗಬೇಕು ಎಂದು ಮಡಿವಾಳ ಯುವ ವೇದಿಕೆ ಅಧ್ಯಕ್ಷ ಕಾಂತರಾಜು ಹೇಳಿದರು.</p>.<p>ಪಟ್ಟಣದಲ್ಲಿ ಮಡಿವಾಳ ವೇದಿಕೆ ಹಾಗೂ ಮಡಿವಾಳ ಮಲ್ಲಿಗಮ್ಮ ಸೇವಾ ಟ್ರಸ್ಟ್ನಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಡಿವಾಳ ಸಮುದಾಯ ಅತ್ಯಂತ ಹಿಂದುಳಿದಿದ್ದು, ಈ ಸಮುದಾಯ ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಮಕ್ಕಳು ಕಡ್ಡಾಯವಾಗಿ ವಿದ್ಯಾವಂತಗಬೇಕು. ಆಗ ಎಲ್ಲ ರೀತಿಯ ಪ್ರೋತ್ಸಾಹ ಇತರೆ ಸೌಲಭ್ಯಗಳು ದೊರೆಯುತ್ತವೆ ಎಂದರು.</p>.<p>ಮಡಿವಾಳ ಸಮುದಾಯ ಅತ್ಯಂತ ಹಿಂದುಳಿದಿದೆ. ಸರಿಯಾದ ಸೌಲಭ್ಯ, ಸೂಕ್ತ ಸ್ಥಾನಮಾನ ದೊರೆತಿಲ್ಲ. ಇದರಿಂದ ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುವುದರ ಜೊತೆಗೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದರು.</p>.<p>ಮಡಿವಾಳ ಮಲ್ಲಿಗಮ್ಮ ಸೇವಾ ಟ್ರಸ್ಟ್ ಕಾರ್ಯದರ್ಶಿ ತೊಳಸಮ್ಮ ಮಾತನಾಡಿ, ಸಮಾಜಕ್ಕೆ ಮಡಿವಾಳ ಜನಾಂಗ ಅನೇಕ ಕೊಡುಗೆಗಳನ್ನು ನೀಡಿದೆ. ಮಡಿವಾಳ ಸಮುದಾಯಕ್ಕೆ ನಿಗಮ ಮಂಡಳಿ ಸ್ಥಾಪಿಸಬೇಕು ಎಂದರು.</p>.<p>ತಾಲ್ಲೂಕು ಮಡಿವಾಳ ಸಂಘದ ಗೌರವ ಅಧ್ಯಕ್ಷ ಹಾಗೂ ಬಗರ್ ಹುಕ್ಕುಂ ಕಮಿಟಿ ಸದಸ್ಯ ಸಿ.ರಂಗಯ್ಯ ಮಾತನಾಡಿ, ಜನಾಂಗವು ಸಮಾಜದಲ್ಲಿ ಶಕ್ತಿ ಹೊಂದಬೇಕಾದರೆ ರಾಜಕೀಯ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸದೃಢರಾಗಬೇಕು. ಹಿಂದುಳಿದ ವರ್ಗದಲ್ಲಿ ಪ್ರಬಲ ಸಮುದಾಯಗಳು ಮಡಿವಾಳ ಜನಾಂಗವನ್ನು ಮುಂದುವರೆಯಲು ಬಿಡುತ್ತಿಲ್ಲ ಎಂದರು.</p>.<p>ನಿವೃತ್ತ ಶಿಕ್ಷಕ ಕೃಷ್ಣಪ್ಪ ಮಾತನಾಡಿ, ನಮ್ಮ ಮೂಲ ವೃತ್ತಿ ಇಲ್ಲವಾಗುತ್ತಿದೆ ಎಂದರು.</p>.<p>ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾದ ಸಮುದಾಯದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.</p>.<p>ಗೌರವಾಧ್ಯಕ್ಷ ಅಶ್ವತ್ಥಪ್ಪ, ಟ್ರಸ್ಟ್ ಅಧ್ಯಕ್ಷೆ ಉಮಾದೇವಿ, ಶಿಕ್ಷಕಿ ವಿಶಾಲಕ್ಷಮ್ಮ, ಯುವ ವೇದಿಕೆಯ ಸತೀಶ್, ನವೀನ್ಕುಮಾರ್, ಪಾಂಡುವರ್ದನ್, ಶರತ್, ಮಹೇಶ್, ರಾಜೇಶ್, ಮಂಜುನಾಥ್, ಗಿರೀಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ:</strong> ಸಮುದಾಯ ಮುನ್ನೆಲೆಗೆ ಬರಬೇಕಾದರೆ ಆ ಸಮುದಾಯದ ಮಕ್ಕಳು ವಿದ್ಯಾವಂತರಾಗಬೇಕು ಎಂದು ಮಡಿವಾಳ ಯುವ ವೇದಿಕೆ ಅಧ್ಯಕ್ಷ ಕಾಂತರಾಜು ಹೇಳಿದರು.</p>.<p>ಪಟ್ಟಣದಲ್ಲಿ ಮಡಿವಾಳ ವೇದಿಕೆ ಹಾಗೂ ಮಡಿವಾಳ ಮಲ್ಲಿಗಮ್ಮ ಸೇವಾ ಟ್ರಸ್ಟ್ನಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಡಿವಾಳ ಸಮುದಾಯ ಅತ್ಯಂತ ಹಿಂದುಳಿದಿದ್ದು, ಈ ಸಮುದಾಯ ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಮಕ್ಕಳು ಕಡ್ಡಾಯವಾಗಿ ವಿದ್ಯಾವಂತಗಬೇಕು. ಆಗ ಎಲ್ಲ ರೀತಿಯ ಪ್ರೋತ್ಸಾಹ ಇತರೆ ಸೌಲಭ್ಯಗಳು ದೊರೆಯುತ್ತವೆ ಎಂದರು.</p>.<p>ಮಡಿವಾಳ ಸಮುದಾಯ ಅತ್ಯಂತ ಹಿಂದುಳಿದಿದೆ. ಸರಿಯಾದ ಸೌಲಭ್ಯ, ಸೂಕ್ತ ಸ್ಥಾನಮಾನ ದೊರೆತಿಲ್ಲ. ಇದರಿಂದ ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುವುದರ ಜೊತೆಗೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದರು.</p>.<p>ಮಡಿವಾಳ ಮಲ್ಲಿಗಮ್ಮ ಸೇವಾ ಟ್ರಸ್ಟ್ ಕಾರ್ಯದರ್ಶಿ ತೊಳಸಮ್ಮ ಮಾತನಾಡಿ, ಸಮಾಜಕ್ಕೆ ಮಡಿವಾಳ ಜನಾಂಗ ಅನೇಕ ಕೊಡುಗೆಗಳನ್ನು ನೀಡಿದೆ. ಮಡಿವಾಳ ಸಮುದಾಯಕ್ಕೆ ನಿಗಮ ಮಂಡಳಿ ಸ್ಥಾಪಿಸಬೇಕು ಎಂದರು.</p>.<p>ತಾಲ್ಲೂಕು ಮಡಿವಾಳ ಸಂಘದ ಗೌರವ ಅಧ್ಯಕ್ಷ ಹಾಗೂ ಬಗರ್ ಹುಕ್ಕುಂ ಕಮಿಟಿ ಸದಸ್ಯ ಸಿ.ರಂಗಯ್ಯ ಮಾತನಾಡಿ, ಜನಾಂಗವು ಸಮಾಜದಲ್ಲಿ ಶಕ್ತಿ ಹೊಂದಬೇಕಾದರೆ ರಾಜಕೀಯ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸದೃಢರಾಗಬೇಕು. ಹಿಂದುಳಿದ ವರ್ಗದಲ್ಲಿ ಪ್ರಬಲ ಸಮುದಾಯಗಳು ಮಡಿವಾಳ ಜನಾಂಗವನ್ನು ಮುಂದುವರೆಯಲು ಬಿಡುತ್ತಿಲ್ಲ ಎಂದರು.</p>.<p>ನಿವೃತ್ತ ಶಿಕ್ಷಕ ಕೃಷ್ಣಪ್ಪ ಮಾತನಾಡಿ, ನಮ್ಮ ಮೂಲ ವೃತ್ತಿ ಇಲ್ಲವಾಗುತ್ತಿದೆ ಎಂದರು.</p>.<p>ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾದ ಸಮುದಾಯದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.</p>.<p>ಗೌರವಾಧ್ಯಕ್ಷ ಅಶ್ವತ್ಥಪ್ಪ, ಟ್ರಸ್ಟ್ ಅಧ್ಯಕ್ಷೆ ಉಮಾದೇವಿ, ಶಿಕ್ಷಕಿ ವಿಶಾಲಕ್ಷಮ್ಮ, ಯುವ ವೇದಿಕೆಯ ಸತೀಶ್, ನವೀನ್ಕುಮಾರ್, ಪಾಂಡುವರ್ದನ್, ಶರತ್, ಮಹೇಶ್, ರಾಜೇಶ್, ಮಂಜುನಾಥ್, ಗಿರೀಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>