<p><strong>ಶಿರಾ</strong>: ತಾಲ್ಲೂಕಿನಲ್ಲಿ ಶೇಂಗಾ ಬೆಳೆ ವಿಫಲವಾಗಿರುವ ಬಗ್ಗೆ ಡಿಸೆಂಬರ್ 10ರಂದು ‘ಪ್ರಜಾವಾಣಿ’ಯಲ್ಲಿ ‘ಭಣಗುಡುತ್ತಿರುವ ಶೇಂಗಾ ಮಾರುಕಟ್ಟೆ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ವರದಿಯನ್ನು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ವಿಧಾನಪರಿಷತ್ನಲ್ಲಿ ಪ್ರಸ್ತಾಪಿಸಿದರು.</p>.<p>ತಾಲ್ಲೂಕಿನಲ್ಲಿ ಶೇಂಗಾ ಪ್ರಮುಖ ಬೆಳೆಯಾಗಿದ್ದು ಈ ಬಾರಿ ಇಳುವರಿ ಕುಂಠಿತವಾದ ಹಿನ್ನೆಲೆಯಲ್ಲಿ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ವರದಿ ಪ್ರಕಟವಾಗಿದ್ದು ವಿಧಾನ ಮಂಡಲದಲ್ಲಿ ಚಿದಾನಂದ ಎಂ.ಗೌಡ ಅವರು ಪ್ರಜಾವಾಣಿಯಲ್ಲಿ ಪ್ರಕಟವಾದ ವರದಿಯನ್ನು ಸದನದ ಗಮನಕ್ಕೆ ತರುವ ಮೂಲಕ ಸರ್ಕಾರ ರೈತರ ನೋವಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.</p>.<p>ಒಂದು ಕಾಲದಲ್ಲಿ ಏಷ್ಯಾದಲ್ಲೇ ಪ್ರಸಿದ್ಧವಾಗಿದ್ದ ಮತ್ತು ಶೇಂಗಾ ವಹಿವಾಟಿಗೆ ಹೆಸರಾಗಿದ್ದ ಶಿರಾ ಮಾರುಕಟ್ಟೆ ಇಂದು ಕಳೆಗುಂದಿದೆ. ತುಮಕೂರು, ಚಿತ್ರದುರ್ಗ ಮತ್ತು ನೆರೆಯ ಆಂಧ್ರಪ್ರದೇಶದ ರೈತರು ಇಲ್ಲಿಗೆ ಬರುತ್ತಿದ್ದರು. ಆದರೆ ಸಕಾಲಕ್ಕೆ ಮಳೆಯಾಗದೆ ಬೆಳೆ ಸಂಪೂರ್ಣ ಕೈಕೊಟ್ಟಿದೆ. ಇಳುವರಿ ಶೇ 60-70 ರಷ್ಟು ಕುಸಿದಿದೆ ಎಂದರು.</p>.<p>ಉತ್ಪಾದನೆ ಕಡಿಮೆಯಾಗಿರುವುದರಿಂದ ಮಾರುಕಟ್ಟೆಯಲ್ಲಿ ಶೇಂಗಾ ಎಣ್ಣೆ ಬೆಲೆ ಜನರ ಕೈಗೆಟುಕದಂತಾಗಿದೆ. ರೈತರು ಬಿತ್ತನೆಗೆಂದು ಇಟ್ಟುಕೊಂಡಿದ್ದ ಶೇಂಗಾ ಕೂಡ ಖಾಲಿಯಾಗಿದೆ. ಹಾಕಿದ ಬಂಡವಾಳ ವಾಪಸ್ ಸಿಗದೆ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ಈ ಹಂತದಲ್ಲಿ ಸರ್ಕಾರ ರೈತರ ಕೈಹಿಡಿಯದಿದ್ದರೆ ಅವರು ಕೃಷಿಯಿಂದ ವಿಮುಖರಾಗುವ ಅಪಾಯವಿದೆ ಎಂದು ಎಚ್ಚರಿಸಿದರು.</p>.<p>ಬರಪೀಡಿತ ಪ್ರದೇಶದ ಶೇಂಗಾ ಬೆಳೆಗಾರರಿಗೆ ಹೆಕ್ಟೇರ್ ಆಧಾರದಲ್ಲಿ ತಕ್ಷಣವೇ ವಿಶೇಷ ಬೆಳೆ ಹಾನಿ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ಸಭಾಧ್ಯಕ್ಷರು ಶೇಂಗಾ ಬೆಳೆಗಾರರ ಹಿತರಕ್ಷಣೆಗಾಗಿ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ತಾಲ್ಲೂಕಿನಲ್ಲಿ ಶೇಂಗಾ ಬೆಳೆ ವಿಫಲವಾಗಿರುವ ಬಗ್ಗೆ ಡಿಸೆಂಬರ್ 10ರಂದು ‘ಪ್ರಜಾವಾಣಿ’ಯಲ್ಲಿ ‘ಭಣಗುಡುತ್ತಿರುವ ಶೇಂಗಾ ಮಾರುಕಟ್ಟೆ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ವರದಿಯನ್ನು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ವಿಧಾನಪರಿಷತ್ನಲ್ಲಿ ಪ್ರಸ್ತಾಪಿಸಿದರು.</p>.<p>ತಾಲ್ಲೂಕಿನಲ್ಲಿ ಶೇಂಗಾ ಪ್ರಮುಖ ಬೆಳೆಯಾಗಿದ್ದು ಈ ಬಾರಿ ಇಳುವರಿ ಕುಂಠಿತವಾದ ಹಿನ್ನೆಲೆಯಲ್ಲಿ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ವರದಿ ಪ್ರಕಟವಾಗಿದ್ದು ವಿಧಾನ ಮಂಡಲದಲ್ಲಿ ಚಿದಾನಂದ ಎಂ.ಗೌಡ ಅವರು ಪ್ರಜಾವಾಣಿಯಲ್ಲಿ ಪ್ರಕಟವಾದ ವರದಿಯನ್ನು ಸದನದ ಗಮನಕ್ಕೆ ತರುವ ಮೂಲಕ ಸರ್ಕಾರ ರೈತರ ನೋವಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.</p>.<p>ಒಂದು ಕಾಲದಲ್ಲಿ ಏಷ್ಯಾದಲ್ಲೇ ಪ್ರಸಿದ್ಧವಾಗಿದ್ದ ಮತ್ತು ಶೇಂಗಾ ವಹಿವಾಟಿಗೆ ಹೆಸರಾಗಿದ್ದ ಶಿರಾ ಮಾರುಕಟ್ಟೆ ಇಂದು ಕಳೆಗುಂದಿದೆ. ತುಮಕೂರು, ಚಿತ್ರದುರ್ಗ ಮತ್ತು ನೆರೆಯ ಆಂಧ್ರಪ್ರದೇಶದ ರೈತರು ಇಲ್ಲಿಗೆ ಬರುತ್ತಿದ್ದರು. ಆದರೆ ಸಕಾಲಕ್ಕೆ ಮಳೆಯಾಗದೆ ಬೆಳೆ ಸಂಪೂರ್ಣ ಕೈಕೊಟ್ಟಿದೆ. ಇಳುವರಿ ಶೇ 60-70 ರಷ್ಟು ಕುಸಿದಿದೆ ಎಂದರು.</p>.<p>ಉತ್ಪಾದನೆ ಕಡಿಮೆಯಾಗಿರುವುದರಿಂದ ಮಾರುಕಟ್ಟೆಯಲ್ಲಿ ಶೇಂಗಾ ಎಣ್ಣೆ ಬೆಲೆ ಜನರ ಕೈಗೆಟುಕದಂತಾಗಿದೆ. ರೈತರು ಬಿತ್ತನೆಗೆಂದು ಇಟ್ಟುಕೊಂಡಿದ್ದ ಶೇಂಗಾ ಕೂಡ ಖಾಲಿಯಾಗಿದೆ. ಹಾಕಿದ ಬಂಡವಾಳ ವಾಪಸ್ ಸಿಗದೆ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ಈ ಹಂತದಲ್ಲಿ ಸರ್ಕಾರ ರೈತರ ಕೈಹಿಡಿಯದಿದ್ದರೆ ಅವರು ಕೃಷಿಯಿಂದ ವಿಮುಖರಾಗುವ ಅಪಾಯವಿದೆ ಎಂದು ಎಚ್ಚರಿಸಿದರು.</p>.<p>ಬರಪೀಡಿತ ಪ್ರದೇಶದ ಶೇಂಗಾ ಬೆಳೆಗಾರರಿಗೆ ಹೆಕ್ಟೇರ್ ಆಧಾರದಲ್ಲಿ ತಕ್ಷಣವೇ ವಿಶೇಷ ಬೆಳೆ ಹಾನಿ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ಸಭಾಧ್ಯಕ್ಷರು ಶೇಂಗಾ ಬೆಳೆಗಾರರ ಹಿತರಕ್ಷಣೆಗಾಗಿ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>