<p><strong>ಶಿರಾ</strong>: ತಾಲ್ಲೂಕಿನಲ್ಲಿ ಶೇಂಗಾ ಬೆಳೆ ವಿಫಲವಾಗಿರುವ ಬಗ್ಗೆ ಡಿಸೆಂಬರ್ 10ರಂದು ‘ಪ್ರಜಾವಾಣಿ’ಯಲ್ಲಿ ‘ಭಣಗುಡುತ್ತಿರುವ ಶೇಂಗಾ ಮಾರುಕಟ್ಟೆ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ವರದಿಯನ್ನು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ವಿಧಾನಪರಿಷತ್ನಲ್ಲಿ ಪ್ರಸ್ತಾಪಿಸಿದರು.</p>.<p>ತಾಲ್ಲೂಕಿನಲ್ಲಿ ಶೇಂಗಾ ಪ್ರಮುಖ ಬೆಳೆಯಾಗಿದ್ದು ಈ ಬಾರಿ ಇಳುವರಿ ಕುಂಠಿತವಾದ ಹಿನ್ನೆಲೆಯಲ್ಲಿ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ವರದಿ ಪ್ರಕಟವಾಗಿದ್ದು ವಿಧಾನ ಮಂಡಲದಲ್ಲಿ ಚಿದಾನಂದ ಎಂ.ಗೌಡ ಅವರು ಪ್ರಜಾವಾಣಿಯಲ್ಲಿ ಪ್ರಕಟವಾದ ವರದಿಯನ್ನು ಸದನದ ಗಮನಕ್ಕೆ ತರುವ ಮೂಲಕ ಸರ್ಕಾರ ರೈತರ ನೋವಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.</p>.<p>ಒಂದು ಕಾಲದಲ್ಲಿ ಏಷ್ಯಾದಲ್ಲೇ ಪ್ರಸಿದ್ಧವಾಗಿದ್ದ ಮತ್ತು ಶೇಂಗಾ ವಹಿವಾಟಿಗೆ ಹೆಸರಾಗಿದ್ದ ಶಿರಾ ಮಾರುಕಟ್ಟೆ ಇಂದು ಕಳೆಗುಂದಿದೆ. ತುಮಕೂರು, ಚಿತ್ರದುರ್ಗ ಮತ್ತು ನೆರೆಯ ಆಂಧ್ರಪ್ರದೇಶದ ರೈತರು ಇಲ್ಲಿಗೆ ಬರುತ್ತಿದ್ದರು. ಆದರೆ ಸಕಾಲಕ್ಕೆ ಮಳೆಯಾಗದೆ ಬೆಳೆ ಸಂಪೂರ್ಣ ಕೈಕೊಟ್ಟಿದೆ. ಇಳುವರಿ ಶೇ 60-70 ರಷ್ಟು ಕುಸಿದಿದೆ ಎಂದರು.</p>.<p>ಉತ್ಪಾದನೆ ಕಡಿಮೆಯಾಗಿರುವುದರಿಂದ ಮಾರುಕಟ್ಟೆಯಲ್ಲಿ ಶೇಂಗಾ ಎಣ್ಣೆ ಬೆಲೆ ಜನರ ಕೈಗೆಟುಕದಂತಾಗಿದೆ. ರೈತರು ಬಿತ್ತನೆಗೆಂದು ಇಟ್ಟುಕೊಂಡಿದ್ದ ಶೇಂಗಾ ಕೂಡ ಖಾಲಿಯಾಗಿದೆ. ಹಾಕಿದ ಬಂಡವಾಳ ವಾಪಸ್ ಸಿಗದೆ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ಈ ಹಂತದಲ್ಲಿ ಸರ್ಕಾರ ರೈತರ ಕೈಹಿಡಿಯದಿದ್ದರೆ ಅವರು ಕೃಷಿಯಿಂದ ವಿಮುಖರಾಗುವ ಅಪಾಯವಿದೆ ಎಂದು ಎಚ್ಚರಿಸಿದರು.</p>.<p>ಬರಪೀಡಿತ ಪ್ರದೇಶದ ಶೇಂಗಾ ಬೆಳೆಗಾರರಿಗೆ ಹೆಕ್ಟೇರ್ ಆಧಾರದಲ್ಲಿ ತಕ್ಷಣವೇ ವಿಶೇಷ ಬೆಳೆ ಹಾನಿ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ಸಭಾಧ್ಯಕ್ಷರು ಶೇಂಗಾ ಬೆಳೆಗಾರರ ಹಿತರಕ್ಷಣೆಗಾಗಿ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.</p>
<p><strong>ಶಿರಾ</strong>: ತಾಲ್ಲೂಕಿನಲ್ಲಿ ಶೇಂಗಾ ಬೆಳೆ ವಿಫಲವಾಗಿರುವ ಬಗ್ಗೆ ಡಿಸೆಂಬರ್ 10ರಂದು ‘ಪ್ರಜಾವಾಣಿ’ಯಲ್ಲಿ ‘ಭಣಗುಡುತ್ತಿರುವ ಶೇಂಗಾ ಮಾರುಕಟ್ಟೆ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ವರದಿಯನ್ನು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ವಿಧಾನಪರಿಷತ್ನಲ್ಲಿ ಪ್ರಸ್ತಾಪಿಸಿದರು.</p>.<p>ತಾಲ್ಲೂಕಿನಲ್ಲಿ ಶೇಂಗಾ ಪ್ರಮುಖ ಬೆಳೆಯಾಗಿದ್ದು ಈ ಬಾರಿ ಇಳುವರಿ ಕುಂಠಿತವಾದ ಹಿನ್ನೆಲೆಯಲ್ಲಿ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ವರದಿ ಪ್ರಕಟವಾಗಿದ್ದು ವಿಧಾನ ಮಂಡಲದಲ್ಲಿ ಚಿದಾನಂದ ಎಂ.ಗೌಡ ಅವರು ಪ್ರಜಾವಾಣಿಯಲ್ಲಿ ಪ್ರಕಟವಾದ ವರದಿಯನ್ನು ಸದನದ ಗಮನಕ್ಕೆ ತರುವ ಮೂಲಕ ಸರ್ಕಾರ ರೈತರ ನೋವಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.</p>.<p>ಒಂದು ಕಾಲದಲ್ಲಿ ಏಷ್ಯಾದಲ್ಲೇ ಪ್ರಸಿದ್ಧವಾಗಿದ್ದ ಮತ್ತು ಶೇಂಗಾ ವಹಿವಾಟಿಗೆ ಹೆಸರಾಗಿದ್ದ ಶಿರಾ ಮಾರುಕಟ್ಟೆ ಇಂದು ಕಳೆಗುಂದಿದೆ. ತುಮಕೂರು, ಚಿತ್ರದುರ್ಗ ಮತ್ತು ನೆರೆಯ ಆಂಧ್ರಪ್ರದೇಶದ ರೈತರು ಇಲ್ಲಿಗೆ ಬರುತ್ತಿದ್ದರು. ಆದರೆ ಸಕಾಲಕ್ಕೆ ಮಳೆಯಾಗದೆ ಬೆಳೆ ಸಂಪೂರ್ಣ ಕೈಕೊಟ್ಟಿದೆ. ಇಳುವರಿ ಶೇ 60-70 ರಷ್ಟು ಕುಸಿದಿದೆ ಎಂದರು.</p>.<p>ಉತ್ಪಾದನೆ ಕಡಿಮೆಯಾಗಿರುವುದರಿಂದ ಮಾರುಕಟ್ಟೆಯಲ್ಲಿ ಶೇಂಗಾ ಎಣ್ಣೆ ಬೆಲೆ ಜನರ ಕೈಗೆಟುಕದಂತಾಗಿದೆ. ರೈತರು ಬಿತ್ತನೆಗೆಂದು ಇಟ್ಟುಕೊಂಡಿದ್ದ ಶೇಂಗಾ ಕೂಡ ಖಾಲಿಯಾಗಿದೆ. ಹಾಕಿದ ಬಂಡವಾಳ ವಾಪಸ್ ಸಿಗದೆ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ಈ ಹಂತದಲ್ಲಿ ಸರ್ಕಾರ ರೈತರ ಕೈಹಿಡಿಯದಿದ್ದರೆ ಅವರು ಕೃಷಿಯಿಂದ ವಿಮುಖರಾಗುವ ಅಪಾಯವಿದೆ ಎಂದು ಎಚ್ಚರಿಸಿದರು.</p>.<p>ಬರಪೀಡಿತ ಪ್ರದೇಶದ ಶೇಂಗಾ ಬೆಳೆಗಾರರಿಗೆ ಹೆಕ್ಟೇರ್ ಆಧಾರದಲ್ಲಿ ತಕ್ಷಣವೇ ವಿಶೇಷ ಬೆಳೆ ಹಾನಿ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ಸಭಾಧ್ಯಕ್ಷರು ಶೇಂಗಾ ಬೆಳೆಗಾರರ ಹಿತರಕ್ಷಣೆಗಾಗಿ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.</p>