<p><strong>ಗುಬ್ಬಿ:</strong> ತಾಲ್ಲೂಕಿನ ಗಡಿಭಾಗ ಬಿಳೆನಂದಿ ಅರಣ್ಯ ಪ್ರದೇಶದಲ್ಲಿ ಕೆಲವರು ಅಕ್ರಮವಾಗಿ ಗಿಡಗಳನ್ನು ತೆರೆವುಗೊಳಿಸಿ ಕೃಷಿ ಭೂಮಿಯನ್ನಾಗಿಸಲು ಯತ್ನಿಸುತ್ತಿದ್ದಾರೆ. ಆದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿ ಶುಕ್ರವಾರ ಬಿಳೆನಂದಿ ಸುತ್ತಮುತ್ತಲ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.</p>.<p>ಅಕ್ರಮವಾಗಿ ಗಿಡ ಕಡಿಯುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಗ್ರಾಮ ಗುಬ್ಬಿ ಮತ್ತು ತುರುವೇಕೆರೆ ತಾಲ್ಲೂಕುಗಳ ಗಡಿಭಾಗದಲ್ಲಿ ಬರುವುದರಿಂದ ಎರಡು ತಾಲ್ಲೂಕುಗಳ ಅಧಿಕಾರಿಗಳು ಒಬ್ಬರ ಮೇಲೆ ಮತ್ತೊಬ್ಬರು ದೂರುತ್ತ, ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಭೂಗಳ್ಳರು ಅರಣ್ಯ ಪ್ರದೇಶಕ್ಕೆ ಕನ್ನ ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಕರೆ ಮಾಡಿದಾಗ ನೆಪಮಾತ್ರಕ್ಕೆ ಬಂದು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುತ್ತಾರೆ. ಆದರೆ ಅನೇಕ ಬಾರಿ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಕಾರರು ದೂರಿದರು.</p>.<p>‘ಗ್ರಾಮದ ಸಮೀಪವೇ ಇರುವ ಅರಣ್ಯಗಳಲ್ಲಿ ಗಿಡ ತೆರವಿಗಾಗಿ ಭೂಗಳ್ಳರು ರಾತ್ರಿ ಜೆಸಿಬಿ ಯಂತ್ರಗಳನ್ನು ತರುತ್ತಾರೆ. ಭಯದಿಂದಾಗಿ ಗ್ರಾಮಸ್ಥರು ಸಮೀಪ ಹೋಗಲು ಹಿಂಜರಿಯುವಂತಾಗಿದೆ. ಅರಣ್ಯ ಅಧಿಕಾರಿಗಳು ಮುಂದೆ ಬಂದಲ್ಲಿ ಗ್ರಾಮಸ್ಥರು ಅವರಿಗೆ ಬೆನ್ನೆಲುಬಾಗಿ ನಿಲ್ಲುವೆವು’ ಎಂದು ಹೇಳಿದರು.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಮುಂದುವರೆಸುವೆವು ಎಂದು ಗ್ರಾಮಸ್ಥರು ಪಟ್ಟುಹಿಡಿದಿದ್ದರು. ಗುಬ್ಬಿ ಮತ್ತು ತುರುವೇಕೆರೆ ತಾಲ್ಲೂಕು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿ ಕ್ರಮ ಕೈಕೊಳ್ಳುವುದಾಗಿ ತಿಳಿಸಿದರು.</p>.<p>ಜಿಲ್ಲಾ ಅರಣ್ಯಾಧಿಕಾರಿಗೆ ಗ್ರಾಮಸ್ಥರು ಕರೆ ಮಾಡಿದಾಗ, ಗಿಡ ತೆರವುಗೊಳಿಸಿರುವ ಜಾಗದಲ್ಲಿ ನಾಳೆಯಿಂದ ಹೊಸದಾಗಿ ಗಿಡ ನೆಡುವುದಾಗಿ ಭರವಸೆ ನೀಡಿದರು ಎನ್ನಲಾಗಿದೆ.</p>.<p>ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕಂದಾಯ ಇಲಾಖೆಗೆ ಸೇರಿದ ಗೋಮಾಳವೂ ಇದೆ. ಸದರಿ ಜಾಗವನ್ನು ತಹಶೀಲ್ದಾರ್ ಜಂಟಿ ಸರ್ವೆ ಮಾಡಿಸಿ, ಅರಣ್ಯ ಇಲಾಖೆಯ ಸ್ವಾಧೀನಕ್ಕೆ ನೀಡಿದಲ್ಲಿ ಗಿಡಗಳನ್ನು ಬೆಳೆಸಲು ಅನುಕೂಲವಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.</p>.<p>ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು ಅರಣ್ಯ ಪ್ರದೇಶ ಸಂರಕ್ಷಿಸದೆ ಭೂಗಳ್ಳರ ಜೊತೆ ಕೈಜೋಡಿಸಿದ್ದು, ಕಂಡುಬಂದಲ್ಲಿ ಹೋರಾಟ ಮಾಡಲಾಗುವುದು ಎಂದು ಸುತ್ತಲಿನ ಗ್ರಾಮಸ್ಥರು ಎಚ್ಚರಿಸಿದ್ದಾರೆ.</p>.<p>ಪ್ರತಿಭಟನೆಯಲ್ಲಿ ಸುತ್ತಮುತ್ತಲ ಗ್ರಾಮಗಳ ನೂರಾರು ರೈತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ತಾಲ್ಲೂಕಿನ ಗಡಿಭಾಗ ಬಿಳೆನಂದಿ ಅರಣ್ಯ ಪ್ರದೇಶದಲ್ಲಿ ಕೆಲವರು ಅಕ್ರಮವಾಗಿ ಗಿಡಗಳನ್ನು ತೆರೆವುಗೊಳಿಸಿ ಕೃಷಿ ಭೂಮಿಯನ್ನಾಗಿಸಲು ಯತ್ನಿಸುತ್ತಿದ್ದಾರೆ. ಆದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿ ಶುಕ್ರವಾರ ಬಿಳೆನಂದಿ ಸುತ್ತಮುತ್ತಲ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.</p>.<p>ಅಕ್ರಮವಾಗಿ ಗಿಡ ಕಡಿಯುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಗ್ರಾಮ ಗುಬ್ಬಿ ಮತ್ತು ತುರುವೇಕೆರೆ ತಾಲ್ಲೂಕುಗಳ ಗಡಿಭಾಗದಲ್ಲಿ ಬರುವುದರಿಂದ ಎರಡು ತಾಲ್ಲೂಕುಗಳ ಅಧಿಕಾರಿಗಳು ಒಬ್ಬರ ಮೇಲೆ ಮತ್ತೊಬ್ಬರು ದೂರುತ್ತ, ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಭೂಗಳ್ಳರು ಅರಣ್ಯ ಪ್ರದೇಶಕ್ಕೆ ಕನ್ನ ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಕರೆ ಮಾಡಿದಾಗ ನೆಪಮಾತ್ರಕ್ಕೆ ಬಂದು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುತ್ತಾರೆ. ಆದರೆ ಅನೇಕ ಬಾರಿ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಕಾರರು ದೂರಿದರು.</p>.<p>‘ಗ್ರಾಮದ ಸಮೀಪವೇ ಇರುವ ಅರಣ್ಯಗಳಲ್ಲಿ ಗಿಡ ತೆರವಿಗಾಗಿ ಭೂಗಳ್ಳರು ರಾತ್ರಿ ಜೆಸಿಬಿ ಯಂತ್ರಗಳನ್ನು ತರುತ್ತಾರೆ. ಭಯದಿಂದಾಗಿ ಗ್ರಾಮಸ್ಥರು ಸಮೀಪ ಹೋಗಲು ಹಿಂಜರಿಯುವಂತಾಗಿದೆ. ಅರಣ್ಯ ಅಧಿಕಾರಿಗಳು ಮುಂದೆ ಬಂದಲ್ಲಿ ಗ್ರಾಮಸ್ಥರು ಅವರಿಗೆ ಬೆನ್ನೆಲುಬಾಗಿ ನಿಲ್ಲುವೆವು’ ಎಂದು ಹೇಳಿದರು.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಮುಂದುವರೆಸುವೆವು ಎಂದು ಗ್ರಾಮಸ್ಥರು ಪಟ್ಟುಹಿಡಿದಿದ್ದರು. ಗುಬ್ಬಿ ಮತ್ತು ತುರುವೇಕೆರೆ ತಾಲ್ಲೂಕು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿ ಕ್ರಮ ಕೈಕೊಳ್ಳುವುದಾಗಿ ತಿಳಿಸಿದರು.</p>.<p>ಜಿಲ್ಲಾ ಅರಣ್ಯಾಧಿಕಾರಿಗೆ ಗ್ರಾಮಸ್ಥರು ಕರೆ ಮಾಡಿದಾಗ, ಗಿಡ ತೆರವುಗೊಳಿಸಿರುವ ಜಾಗದಲ್ಲಿ ನಾಳೆಯಿಂದ ಹೊಸದಾಗಿ ಗಿಡ ನೆಡುವುದಾಗಿ ಭರವಸೆ ನೀಡಿದರು ಎನ್ನಲಾಗಿದೆ.</p>.<p>ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕಂದಾಯ ಇಲಾಖೆಗೆ ಸೇರಿದ ಗೋಮಾಳವೂ ಇದೆ. ಸದರಿ ಜಾಗವನ್ನು ತಹಶೀಲ್ದಾರ್ ಜಂಟಿ ಸರ್ವೆ ಮಾಡಿಸಿ, ಅರಣ್ಯ ಇಲಾಖೆಯ ಸ್ವಾಧೀನಕ್ಕೆ ನೀಡಿದಲ್ಲಿ ಗಿಡಗಳನ್ನು ಬೆಳೆಸಲು ಅನುಕೂಲವಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.</p>.<p>ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು ಅರಣ್ಯ ಪ್ರದೇಶ ಸಂರಕ್ಷಿಸದೆ ಭೂಗಳ್ಳರ ಜೊತೆ ಕೈಜೋಡಿಸಿದ್ದು, ಕಂಡುಬಂದಲ್ಲಿ ಹೋರಾಟ ಮಾಡಲಾಗುವುದು ಎಂದು ಸುತ್ತಲಿನ ಗ್ರಾಮಸ್ಥರು ಎಚ್ಚರಿಸಿದ್ದಾರೆ.</p>.<p>ಪ್ರತಿಭಟನೆಯಲ್ಲಿ ಸುತ್ತಮುತ್ತಲ ಗ್ರಾಮಗಳ ನೂರಾರು ರೈತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>