ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತುಮಕೂರು ಉಪ ವಿಭಾಗಾಧಿಕಾರಿ ಹೋಟೆಲ್ ಶಿವಪ್ಪ, ಅಧಿಕಾರಿಗಳು ಗ್ರಾಮಗಳಿಗೆ ಬರುತ್ತಿರುವುದರಿಂದ ರೈತರ ಕೆಲಸಗಳು ತುರ್ತಾಗಿ ಆಗಲು ಸಾಧ್ಯವಾಗುತ್ತಿದೆ. ಯಾವುದೇ ಸಮಸ್ಯೆಗಳು ಇದ್ದಲ್ಲಿ ರೈತರು ಮಧ್ಯವರ್ತಿಗಳ ಬಳಿ ಹೋಗಬಾರದು. ನೇರವಾಗಿ ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರನ್ನು ಸಂಪರ್ಕಿಸಿ ಪರಿಹಾರ ಪಡೆದುಕೊಳ್ಳಬಹುದು ಎಂದು ತಿಳಿಸಿದರು.