ನಿತ್ಯ ನೀಡುತ್ತಿರುವ ಮೂರು ಫೇಸ್ ವಿದ್ಯುತ್ ಕೂಡ ಸಮರ್ಪಕವಾಗಿ ಪೂರೈಕೆ ಮಾಡುತ್ತಿಲ್ಲ. ಈ ಬಗ್ಗೆ ರೈತರು ಪ್ರಶ್ನೆ ಮಾಡಿದರೆ ಬೆಸ್ಕಾಂ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಉತ್ತರ ನೀಡುತ್ತಿದ್ದಾರೆ. ರೈತರ ಕಷ್ಟ ಅವರಿಗೆ ತಿಳಿಯುತ್ತಿಲ್ಲ ಎಂದು ರೈತ ಸಂಘದ ಅಧ್ಯಕ್ಷ ಸಣ್ಣದ್ಯಾಮೇಗೌಡ ನೇತೃತ್ವದಲ್ಲಿ ಧರಣಿ ನಡೆಸಿ ಬೆಸ್ಕಾಂ ಎಇಇ ಗೋವಿಂದರಾಜು ಅವರಿಗೆ ಮನವಿ ಸಲ್ಲಿಸಿದರು.