ಜಿಲ್ಲಾ ಗ್ರಾಹಕ ಸಂರಕ್ಷಣಾ ಪರಿಷತ್ ಸದಸ್ಯರಾಗಿ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಗ್ರಾಹಕರ ಹಕ್ಕುಗಳು, ಕರ್ತವ್ಯಗಳು, ಮಾಹಿತಿ ಹಕ್ಕು, ಗ್ರಾಹಕರ ವಿವಾದಗಳ ಪರಿಹಾರಕ್ಕೆ ಸಂಬಂಧಿಸಿದ ಸಲಹೆಗಳನ್ನು ನಿರಂತರವಾಗಿ ಜನರಿಗೆ ನೀಡುತ್ತಾ ಬಂದಿದ್ದಾರೆ. ಇಂತಹವರನ್ನು ಪರಿಷತ್ಗೆ ನೇಮಕ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.