ಕೊರೊನಾ ಸಮಯದಲ್ಲಿ ಜನತೆ ಸಂಕಷ್ಟದಲ್ಲಿದ್ದಾರೆ. ಜೊತೆಗೆ ಯುಗಾದಿ ಹಬ್ಬ ಸಹ ಇರುವುದರಿಂದ ಜನರು ಊರಿಗೆ ಹೋಗಲು ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಸಾರಿಗೆ ನೌಕರರ ಸಮಸ್ಯೆ ಕೇಳುವ ಸೌಜನ್ಯ ಸಹ ಸರ್ಕಾರಕ್ಕೆ ಇಲ್ಲ. ಇಂತಹ ಸಮಯದಲ್ಲಿ ಸರ್ಕಾರ ಹಠಮಾರಿ ಧೋರಣೆ ತಾಳದೆ ನೌಕರರ ಹಿತಕಾಯುವ ಜೊತೆಗೆ ಸಾರ್ವಜನಿಕರ ತೊಂದರೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.