<p><strong>ಕುಣಿಗಲ್: </strong>ಸರ್ಕಾರಿ ಗೋಮಾಳ ಜಾಗದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಿಂದ ಬೆಳೆಸಲಾಗಿದ್ದ ಎರಡು ಎಕರೆ ನೀಲಗಿರಿ ಮರಗಳನ್ನು ನಾಶ ಮಾಡಿದ್ದ ತಾಲ್ಲೂಕು ಪಂಚಾಯಿತಿ ಸದಸ್ಯೆಯ ಪತಿಯ ವಿರುದ್ಧ ವಲಯ ಅರಣ್ಯಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ.</p>.<p>ಕುಣಿಗಲ್ ತಾಲ್ಲೂಕು ಪಂಚಾಯಿತಿ ಸದಸ್ಯೆ ಷರೀಫಾಬಿ ಪತಿ ಮೊಹಮ್ಮದ್ ಸೆಮ್ಮಿವುಲ್ಲ ಅವರ ಮೇಲೆ ಪ್ರಕರಣ ದಾಖಲಾಗಿದೆ.</p>.<p>ಕಿತ್ತಾನಾಮಂಗಲ ಸರ್ವೇ ನಂ. 78ರ ಗೋಮಾಳದಲ್ಲಿ 1998ರಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಿಂದ ನೀಲಗಿರಿ ಸಸಿಗಳನ್ನು ಬೆಳೆಸಲಾಗಿತ್ತು. ಈ ಭಾಗದಲ್ಲಿ ಸುಮಾರು ಎರಡು ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಸುಮಾರು 200 ನೀಲಗಿರಿ ಮರಗಳನ್ನು ಮೊಹಮ್ಮದ್ ಸೆಮ್ಮಿವುಲ್ಲಾ ಜೆಸಿಬಿ ಬಳಸಿ ಕೆಡವಿ ಜಮೀನು ಸಮತಟ್ಟು ಮಾಡಿದ್ದಾರೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಪ್ರಕರಣ ದಾಖಲಿಸಿರುವುದಾಗಿ ವಲಯ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.</p>.<p>ಬೆಳೆದು ನಿಂತ ಮರಗಳನ್ನು ಕಡಿದ ಬಗ್ಗೆ ಅಸಮಾಧಾನಗೊಂಡ ಗ್ರಾಮಸ್ಥರಾದ ಮೋಹನ್, ಬಾಬು ಮತ್ತು ಕೆ.ಎಚ್. ಎನ್.ಗೌಡ ಅವರು ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್: </strong>ಸರ್ಕಾರಿ ಗೋಮಾಳ ಜಾಗದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಿಂದ ಬೆಳೆಸಲಾಗಿದ್ದ ಎರಡು ಎಕರೆ ನೀಲಗಿರಿ ಮರಗಳನ್ನು ನಾಶ ಮಾಡಿದ್ದ ತಾಲ್ಲೂಕು ಪಂಚಾಯಿತಿ ಸದಸ್ಯೆಯ ಪತಿಯ ವಿರುದ್ಧ ವಲಯ ಅರಣ್ಯಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ.</p>.<p>ಕುಣಿಗಲ್ ತಾಲ್ಲೂಕು ಪಂಚಾಯಿತಿ ಸದಸ್ಯೆ ಷರೀಫಾಬಿ ಪತಿ ಮೊಹಮ್ಮದ್ ಸೆಮ್ಮಿವುಲ್ಲ ಅವರ ಮೇಲೆ ಪ್ರಕರಣ ದಾಖಲಾಗಿದೆ.</p>.<p>ಕಿತ್ತಾನಾಮಂಗಲ ಸರ್ವೇ ನಂ. 78ರ ಗೋಮಾಳದಲ್ಲಿ 1998ರಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಿಂದ ನೀಲಗಿರಿ ಸಸಿಗಳನ್ನು ಬೆಳೆಸಲಾಗಿತ್ತು. ಈ ಭಾಗದಲ್ಲಿ ಸುಮಾರು ಎರಡು ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಸುಮಾರು 200 ನೀಲಗಿರಿ ಮರಗಳನ್ನು ಮೊಹಮ್ಮದ್ ಸೆಮ್ಮಿವುಲ್ಲಾ ಜೆಸಿಬಿ ಬಳಸಿ ಕೆಡವಿ ಜಮೀನು ಸಮತಟ್ಟು ಮಾಡಿದ್ದಾರೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಪ್ರಕರಣ ದಾಖಲಿಸಿರುವುದಾಗಿ ವಲಯ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.</p>.<p>ಬೆಳೆದು ನಿಂತ ಮರಗಳನ್ನು ಕಡಿದ ಬಗ್ಗೆ ಅಸಮಾಧಾನಗೊಂಡ ಗ್ರಾಮಸ್ಥರಾದ ಮೋಹನ್, ಬಾಬು ಮತ್ತು ಕೆ.ಎಚ್. ಎನ್.ಗೌಡ ಅವರು ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>