ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿ ಯೋಜನೆಯಿಂದ ಅಭಿವೃದ್ಧಿ

ನಗರದ ವಿವಿಧೆಡೆ ಎಂಜಿನಿಯರುಗಳ ದಿನಾಚರಣೆ
Last Updated 16 ಸೆಪ್ಟೆಂಬರ್ 2020, 5:23 IST
ಅಕ್ಷರ ಗಾತ್ರ

ತುಮಕೂರು: ರಾಷ್ಟ್ರದ ಸಮಗ್ರ ಅಭಿವೃದ್ಧಿಯಲ್ಲಿ ನೀರಾವರಿ ಯೋಜನೆಗಳು, ಕಾಲುವೆಗಳು ಪ್ರಮುಖವಾದ ಪಾತ್ರ ವಹಿಸುತ್ತವೆ ಎಂದು ಜಲ ಸಂಪನ್ಮೂಲ ಇಲಾಖೆ ನಿವೃತ್ತ ಕಾರ್ಯಪಾಲಕ ಎಂಜಿನಿಯರ್ ಎಚ್.ಬಿ.ಮಲ್ಲೇಶ್ ಹೇಳಿದರು.

ತುಮಕೂರು ವಿಶ್ವವಿದ್ಯಾಲಯದ ಜಿ.ಎಸ್.ಪರಮಶಿವಯ್ಯ ಅಧ್ಯಯನ ಕೇಂದ್ರದಿಂದ ಮಂಗಳವಾರ ಎಂಜಿನಿಯರುಗಳ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ‘ನೀರಾವರಿ ಯೋಜನೆಯಲ್ಲಿ ಎಂಜಿನಿಯರ್‌ಗಳ ಪಾತ್ರ’ ಎಂಬ ಕುರಿತು ಮಾತನಾಡಿದರು.

ಸರ್ ಎಂ.ವಿಶ್ವೇಶ್ವರಯ್ಯ, ಜಿ.ಎಸ್.ಪರಮಶಿವಯ್ಯ ಶ್ರೇಷ್ಠ ಎಂಜಿನಿಯರ್‌ಗಳು. ಅವರ ಯೋಜನೆಗಳಾದ ನೀರಾವರಿ ಕಾಲುವೆ, ಹಳ್ಳ, ಅಣೆಕಟ್ಟು, ಜಲ ಸಂರಕ್ಷಣೆ, ಸಸ್ಯ ಸಂರಕ್ಷಣೆಯನ್ನು ಅಭಿವೃದ್ಧಿಯಲ್ಲಿ ಸೂಕ್ತವಾಗಿ ಬಳಸಿಕೊಂಡರೆ ಆಧುನಿಕ ಜ್ವಲಂತ ಸಮಸ್ಯೆಗಳನ್ನು ಹೋಗಲಾಡಿಸಬಹುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ, ‘ವಿಶ್ವೇಶ್ವರಯ್ಯ, ಜಿ.ಎಸ್.ಪರಮಶಿವಯ್ಯ ಅವರ ನೀರಾವರಿ ದೃಷ್ಟಿಕೋನ, ಧ್ಯೇಯವನ್ನು ಅಭಿವೃದ್ಧಿಯ ದೃಷ್ಟಿಯಲ್ಲಿ ಅಳವಡಿಸಿಕೊಂಡರೆ ಈಗ ಕಾಡುತ್ತಿರುವ ಹಸಿವು, ಜಲ ಸಮಸ್ಯೆ ನಿವಾರಿಸಬಹುದು’ ಎಂದು ಹೇಳಿದರು.

ಸಿಂಡಿಕೇಟ್ ಸದಸ್ಯ ಸುನಿಲ್ ಪ್ರಸಾದ್, ‘ವಿಶ್ವೇಶ್ವರಯ್ಯ ಅವರ ಆಡಳಿತಾತ್ಮಕ ಚಿಂತನೆ, ಕಲ್ಪನೆಗಳನ್ನು ಪೂರ್ಣವಾಗಿ ಅಳವಡಿಸಿಕೊಂಡಾಗ ಯುವ ಜನತೆ ಯೋಗ್ಯವಾದ ಭವಿಷ್ಯ ಕಟ್ಟಿಕೊಳ್ಳಬಹುದು’ ಎಂದರು.

ಕುಲಸಚಿವ ಪ್ರೊ.ಕೆ.ಎನ್.ಗಂಗಾನಾಯಕ್, ಜಿ.ಎಸ್.ಪರಮಶಿವಯ್ಯ ಅಧ್ಯಯನ ಪೀಠದ ಕಾರ್ಯನಿರ್ವಾಹಕ ಡಾ.ಬಿ.ರವೀಂದ್ರಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT