<p><strong>ತುಮಕೂರು: </strong>ನಗರದ 25ನೇ ವಾರ್ಡ್ನ ಮುನಿಸಿಪಲ್ ಬಡಾವಣೆಯಲ್ಲಿ ₹ 75 ಲಕ್ಷ ವೆಚ್ಚದಲ್ಲಿ ಸಿ.ಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಬಡಾವಣೆಯಲ್ಲಿರುವ ಮಹಾತ್ಮಗಾಂಧಿ ಉದ್ಯಾನದಲ್ಲಿ ದೊಡ್ಡ ಮರ ಇದೆ. ಅದನ್ನು ಟ್ರೀಪಾರ್ಕ್ ಆಗಿ ಸ್ಮಾರ್ಟ್ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾಗುತ್ತದೆ. ಜಿಮ್, ವಾಯುವಿಹಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದರು.</p>.<p>ನಗರದಲ್ಲಿ ಎಲ್ಲೆಲ್ಲಿ ರಾಜಗಾಲುವೆ, ಕನ್ಸರ್ವೆನ್ಸಿ ಒತ್ತುವರಿ ಆಗಿದೆಯೋ ಕೂಡಲೇ ತೆರವುಗೊಳಿಸಬೇಕು. ಒತ್ತುವರಿ ಮಾಡಿದ್ದರೆ ಮುಂದೊಂದು ದಿನ ಒತ್ತುವರಿ ತೆರವು ಕಟ್ಟಿಟ್ಟ ಬುತ್ತಿ. ಬಡಾವಣೆಗಳ ಅಭಿವೃದ್ಧಿಗಾಗಿ ಒತ್ತುವರಿ ತೆರವು ಅಗತ್ಯವಾಗಿದೆ. ನಾಗರಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>‘ಕೊರೊನಾದಿಂದ ಆರ್ಥಿಕ ಚಟುವಟಿಕೆಗಳು ಕುಸಿದಿವೆ. ಈಗ ಶೇ 20ರಷ್ಟು ಮಾತ್ರ ಆರ್ಥಿಕ ಚಟುವಟಿಕೆಗಳು ನಡೆಯುತ್ತಿವೆ. ತೆರಿಗೆ ಸಂಗ್ರಹದಲ್ಲೂ ಇಳಿಕೆ ಕಂಡಿದೆ. ಅಭಿವೃದ್ಧಿಗೆ ಅನುದಾನಗಳು ಬಿಡುಗಡೆ ಆಗುವುದು ಕಷ್ಟ. ಇಂತಹ ಪರಿಸ್ಥಿತಿಯಲ್ಲೂ ನಗರಕ್ಕೆ ಮುಖ್ಯಮಂತ್ರಿ ₹ 25 ಕೋಟಿ ನೀಡಿರುವುದು ನಮ್ಮ ಅದೃಷ್ಟ ಎಂದೇ ಭಾವಿಸಬೇಕು’ ಎಂದು ತಿಳಿಸಿದರು.</p>.<p>ಪಾಲಿಕೆ ಸದಸ್ಯೆ ಮಂಜುಳಾ ಆದರ್ಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ನಗರದ 25ನೇ ವಾರ್ಡ್ನ ಮುನಿಸಿಪಲ್ ಬಡಾವಣೆಯಲ್ಲಿ ₹ 75 ಲಕ್ಷ ವೆಚ್ಚದಲ್ಲಿ ಸಿ.ಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಬಡಾವಣೆಯಲ್ಲಿರುವ ಮಹಾತ್ಮಗಾಂಧಿ ಉದ್ಯಾನದಲ್ಲಿ ದೊಡ್ಡ ಮರ ಇದೆ. ಅದನ್ನು ಟ್ರೀಪಾರ್ಕ್ ಆಗಿ ಸ್ಮಾರ್ಟ್ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾಗುತ್ತದೆ. ಜಿಮ್, ವಾಯುವಿಹಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದರು.</p>.<p>ನಗರದಲ್ಲಿ ಎಲ್ಲೆಲ್ಲಿ ರಾಜಗಾಲುವೆ, ಕನ್ಸರ್ವೆನ್ಸಿ ಒತ್ತುವರಿ ಆಗಿದೆಯೋ ಕೂಡಲೇ ತೆರವುಗೊಳಿಸಬೇಕು. ಒತ್ತುವರಿ ಮಾಡಿದ್ದರೆ ಮುಂದೊಂದು ದಿನ ಒತ್ತುವರಿ ತೆರವು ಕಟ್ಟಿಟ್ಟ ಬುತ್ತಿ. ಬಡಾವಣೆಗಳ ಅಭಿವೃದ್ಧಿಗಾಗಿ ಒತ್ತುವರಿ ತೆರವು ಅಗತ್ಯವಾಗಿದೆ. ನಾಗರಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>‘ಕೊರೊನಾದಿಂದ ಆರ್ಥಿಕ ಚಟುವಟಿಕೆಗಳು ಕುಸಿದಿವೆ. ಈಗ ಶೇ 20ರಷ್ಟು ಮಾತ್ರ ಆರ್ಥಿಕ ಚಟುವಟಿಕೆಗಳು ನಡೆಯುತ್ತಿವೆ. ತೆರಿಗೆ ಸಂಗ್ರಹದಲ್ಲೂ ಇಳಿಕೆ ಕಂಡಿದೆ. ಅಭಿವೃದ್ಧಿಗೆ ಅನುದಾನಗಳು ಬಿಡುಗಡೆ ಆಗುವುದು ಕಷ್ಟ. ಇಂತಹ ಪರಿಸ್ಥಿತಿಯಲ್ಲೂ ನಗರಕ್ಕೆ ಮುಖ್ಯಮಂತ್ರಿ ₹ 25 ಕೋಟಿ ನೀಡಿರುವುದು ನಮ್ಮ ಅದೃಷ್ಟ ಎಂದೇ ಭಾವಿಸಬೇಕು’ ಎಂದು ತಿಳಿಸಿದರು.</p>.<p>ಪಾಲಿಕೆ ಸದಸ್ಯೆ ಮಂಜುಳಾ ಆದರ್ಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>