<p><strong>ಪಾವಗಡ:</strong> ತಾಲ್ಲೂಕಿನ ಬೂದಿಬೆಟ್ಟ ಗ್ರಾಮ ಪಂಚಾಯಿತಿಯ ಯರ್ರಮ್ಮನಹಳ್ಳಿ ಕೆರೆಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡಿದ್ದ ಕೂಲಿಕಾರ್ಮಿಕರಿಗೆ ಪೂರ್ತಿ ಕೂಲಿ ಪಾವತಿಸಿಲ್ಲ, ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಕೂಲಿಕಾರ್ಮಿಕರು ಬುಧವಾರ ತಾಲ್ಲೂಕು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ಜೂನ್ನಲ್ಲಿ ಗ್ರಾಮ ಪಂಚಾಯಿತಿಯಿಂದ ನರೇಗಾ ಯೋಜನೆ ಅಡಿಯಲ್ಲಿ ಎರ್ರಮ್ಮನಹಳ್ಳಿ ಕೆರೆಯಲ್ಲಿ 7 ದಿನ ಕೆಲಸ ಮಾಡಲಾಗಿತ್ತು. ಆದರೆ 5 ದಿನದ ಕೂಲಿಯನ್ನು ಮಾತ್ರ ನೀಡಲಾಗಿದೆ. ದಿನಕ್ಕೆ ₹370 ಕೂಲಿ ಹಾಕುವ ಬದಲು ₹190 ಮಾತ್ರ ನೀಡಲಾಗಿದೆ ಎಂದು ಪ್ರತಿಭಟನೆ ನಿರತರು ಆರೋಪಿಸಿದರು.</p>.<p>ಒಂದು ವಾರದ ನಂತರ ಕೆಲಸ ಮಾಡುವುದಕ್ಕೆ ಎನ್ಎಂಆರ್ ನೀಡದೆ, ಬೂದಿ ಬೆಟ್ಟ ಎತ್ತಿನಹಳ್ಳಿ ರಂಗಯ್ಯನರೊಪ್ಪ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡಲಾಗುತ್ತಿದೆ. ಈಗಾಗಲೇ ಕೆಲಸ ಮಾಡಿದ ಹಣವನ್ನೂ ಖಾತೆಗೆ ಹಾಕದ ಕಾರಣ ಜೀವನ ನಿರ್ವಣೆಗೆ ಸಮಸ್ಯೆಯಾಗುತ್ತಿದೆ ಎಂದು ಪ್ರತಿಬಟನೆ ನಿರತರು ದೂರಿದರು.</p>.<p>ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ತಮಗೆ ಕೆಲಸ ನೀಡಬೇಕು. ಸಂಪೂರ್ಣ ಕೂಲಿ ಮೊತ್ತವನ್ನು ಜಮೆ ಮಾಡಬೇಕು ಎಂದು ಒತ್ತಾಯಿಸಿದರು. ಬೇಡಿಕೆ ಈಡೇರಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.</p>.<p>ರಾಮಣ್ಣ, ಸಿದ್ದೇಶ್, ಶ್ರೀನಿವಾಸಲು, ರಾಧಮ್ಮ, ಲಕ್ಷ್ಮೀದೇವಿ, ಮಮತಾ, ಸುಶೀಲ, ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ತಾಲ್ಲೂಕಿನ ಬೂದಿಬೆಟ್ಟ ಗ್ರಾಮ ಪಂಚಾಯಿತಿಯ ಯರ್ರಮ್ಮನಹಳ್ಳಿ ಕೆರೆಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡಿದ್ದ ಕೂಲಿಕಾರ್ಮಿಕರಿಗೆ ಪೂರ್ತಿ ಕೂಲಿ ಪಾವತಿಸಿಲ್ಲ, ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಕೂಲಿಕಾರ್ಮಿಕರು ಬುಧವಾರ ತಾಲ್ಲೂಕು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ಜೂನ್ನಲ್ಲಿ ಗ್ರಾಮ ಪಂಚಾಯಿತಿಯಿಂದ ನರೇಗಾ ಯೋಜನೆ ಅಡಿಯಲ್ಲಿ ಎರ್ರಮ್ಮನಹಳ್ಳಿ ಕೆರೆಯಲ್ಲಿ 7 ದಿನ ಕೆಲಸ ಮಾಡಲಾಗಿತ್ತು. ಆದರೆ 5 ದಿನದ ಕೂಲಿಯನ್ನು ಮಾತ್ರ ನೀಡಲಾಗಿದೆ. ದಿನಕ್ಕೆ ₹370 ಕೂಲಿ ಹಾಕುವ ಬದಲು ₹190 ಮಾತ್ರ ನೀಡಲಾಗಿದೆ ಎಂದು ಪ್ರತಿಭಟನೆ ನಿರತರು ಆರೋಪಿಸಿದರು.</p>.<p>ಒಂದು ವಾರದ ನಂತರ ಕೆಲಸ ಮಾಡುವುದಕ್ಕೆ ಎನ್ಎಂಆರ್ ನೀಡದೆ, ಬೂದಿ ಬೆಟ್ಟ ಎತ್ತಿನಹಳ್ಳಿ ರಂಗಯ್ಯನರೊಪ್ಪ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡಲಾಗುತ್ತಿದೆ. ಈಗಾಗಲೇ ಕೆಲಸ ಮಾಡಿದ ಹಣವನ್ನೂ ಖಾತೆಗೆ ಹಾಕದ ಕಾರಣ ಜೀವನ ನಿರ್ವಣೆಗೆ ಸಮಸ್ಯೆಯಾಗುತ್ತಿದೆ ಎಂದು ಪ್ರತಿಬಟನೆ ನಿರತರು ದೂರಿದರು.</p>.<p>ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ತಮಗೆ ಕೆಲಸ ನೀಡಬೇಕು. ಸಂಪೂರ್ಣ ಕೂಲಿ ಮೊತ್ತವನ್ನು ಜಮೆ ಮಾಡಬೇಕು ಎಂದು ಒತ್ತಾಯಿಸಿದರು. ಬೇಡಿಕೆ ಈಡೇರಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.</p>.<p>ರಾಮಣ್ಣ, ಸಿದ್ದೇಶ್, ಶ್ರೀನಿವಾಸಲು, ರಾಧಮ್ಮ, ಲಕ್ಷ್ಮೀದೇವಿ, ಮಮತಾ, ಸುಶೀಲ, ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>