<p><strong>ಗುಬ್ಬಿ</strong>: ತಾಲ್ಲೂಕಿನ ನಿಟ್ಟೂರಿನಲ್ಲಿರುವ ಡಿಜಿಟಲ್ ಗ್ರಂಥಾಲಯಕ್ಕೆ ಏಳು ತಿಂಗಳಿನಿಂದ ಬೀಗ ಹಾಕಲಾಗಿದೆ. ಗ್ರಂಥಾಲಯ ಬಾಗಿಲು ತೆರೆಯದೆ ಓದುಗರ ಉಪಯೋಗಕ್ಕೆ ಬಾರದಂತಾಗಿದೆ.</p>.<p>ಗ್ರಂಥಾಲಯ ನೋಡಿಕೊಳ್ಳುತ್ತಿದ್ದ ಮೇಲ್ವಿಚಾರಕರು ನಿವೃತ್ತಿಯಾದ ನಂತರ ಹೊಸದಾಗಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳದ ಕಾರಣ ಬೀಗ ಹಾಕಲಾಗಿದೆ. ಗ್ರಂಥಾಲಯವು ಅನೇಕ ತಿಂಗಳುಗಳಿಂದ ಮುಚ್ಚಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರಿಗೆ, ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.</p>.<p>ನಿಟ್ಟೂರಿನ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿಯೇ ಡಿಜಿಟಲ್ ಗ್ರಂಥಾಲಯವಿದ್ದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಮತ್ತೊಬ್ಬ ಸಿಬ್ಬಂದಿಯನ್ನು ನೇಮಿಸಿಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದ್ದರೂ, ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ತಿಂಗಳಾನುಗಟ್ಟಲೇ ಬೀಗ ಹಾಕಿರುವುದರಿಂದ ಪುಸ್ತಕಗಳು ದೂಳು ಹಿಡಿಯುತ್ತಿವೆ. ಗ್ರಂಥಾಲಯದಲ್ಲಿದ್ದ ಕಂಪ್ಯೂಟರ್ ಹಾಗೂ ಪೀಠೋಪಕರಣಗಳು ಹಾಳಾಗುವ ಹಂತ ತಲುಪುತ್ತಿವೆ ಎಂದು ಓದುಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.</p>.<p>ಶಾಲೆ, ಕಾಲೇಜುಗಳಿಗೆ ರಜೆ ಇದ್ದ ಸಂದರ್ಭದಲ್ಲಿ ಮಕ್ಕಳಿಗೆ ಅನುಕೂಲವಾಗಬೇಕಾಗಿದ್ದ ಡಿಜಿಟಲ್ ಗ್ರಂಥಾಲಯಕ್ಕೆ ಬೀಗ ಹಾಕಿರುವುದರಿಂದ ಮಕ್ಕಳು ಗ್ರಂಥಾಲಯದ ಬಳಿ ಬಂದು ವಾಪಸ್ ಹೋಗುವಂತಾಗಿದೆ. ಹೀಗಾಗಿ ಮಕ್ಕಳು ಮನೆಗಳಲ್ಲಿ ಟಿವಿ, ಮೊಬೈಲ್ ನೋಡುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ತಾಲ್ಲೂಕಿನ ನಿಟ್ಟೂರಿನಲ್ಲಿರುವ ಡಿಜಿಟಲ್ ಗ್ರಂಥಾಲಯಕ್ಕೆ ಏಳು ತಿಂಗಳಿನಿಂದ ಬೀಗ ಹಾಕಲಾಗಿದೆ. ಗ್ರಂಥಾಲಯ ಬಾಗಿಲು ತೆರೆಯದೆ ಓದುಗರ ಉಪಯೋಗಕ್ಕೆ ಬಾರದಂತಾಗಿದೆ.</p>.<p>ಗ್ರಂಥಾಲಯ ನೋಡಿಕೊಳ್ಳುತ್ತಿದ್ದ ಮೇಲ್ವಿಚಾರಕರು ನಿವೃತ್ತಿಯಾದ ನಂತರ ಹೊಸದಾಗಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳದ ಕಾರಣ ಬೀಗ ಹಾಕಲಾಗಿದೆ. ಗ್ರಂಥಾಲಯವು ಅನೇಕ ತಿಂಗಳುಗಳಿಂದ ಮುಚ್ಚಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರಿಗೆ, ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.</p>.<p>ನಿಟ್ಟೂರಿನ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿಯೇ ಡಿಜಿಟಲ್ ಗ್ರಂಥಾಲಯವಿದ್ದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಮತ್ತೊಬ್ಬ ಸಿಬ್ಬಂದಿಯನ್ನು ನೇಮಿಸಿಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದ್ದರೂ, ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ತಿಂಗಳಾನುಗಟ್ಟಲೇ ಬೀಗ ಹಾಕಿರುವುದರಿಂದ ಪುಸ್ತಕಗಳು ದೂಳು ಹಿಡಿಯುತ್ತಿವೆ. ಗ್ರಂಥಾಲಯದಲ್ಲಿದ್ದ ಕಂಪ್ಯೂಟರ್ ಹಾಗೂ ಪೀಠೋಪಕರಣಗಳು ಹಾಳಾಗುವ ಹಂತ ತಲುಪುತ್ತಿವೆ ಎಂದು ಓದುಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.</p>.<p>ಶಾಲೆ, ಕಾಲೇಜುಗಳಿಗೆ ರಜೆ ಇದ್ದ ಸಂದರ್ಭದಲ್ಲಿ ಮಕ್ಕಳಿಗೆ ಅನುಕೂಲವಾಗಬೇಕಾಗಿದ್ದ ಡಿಜಿಟಲ್ ಗ್ರಂಥಾಲಯಕ್ಕೆ ಬೀಗ ಹಾಕಿರುವುದರಿಂದ ಮಕ್ಕಳು ಗ್ರಂಥಾಲಯದ ಬಳಿ ಬಂದು ವಾಪಸ್ ಹೋಗುವಂತಾಗಿದೆ. ಹೀಗಾಗಿ ಮಕ್ಕಳು ಮನೆಗಳಲ್ಲಿ ಟಿವಿ, ಮೊಬೈಲ್ ನೋಡುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>