ಮೊದಲ ಪ್ಯಾಕೇಜ್ನಲ್ಲಿ ₹1,250 ಕೋಟಿ, ಎರಡನೇ ಬಾರಿಗೆ ₹500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿ, ದುಡಿಯುವ ವರ್ಗ,ಕುಲಕಸುಬು ನಂಬಿ ಬದುಕುತ್ತಿರುವ ಸಮುದಾಯಗಳಿಗೆ ಆರ್ಥಿಕ ನೆರವು ನೀಡಲಾಗಿದೆ. ಆದರೆ ಸರ್ಕಾರದ ಸವಲತ್ತುಗಳನ್ನೇ ನಂಬಿ ಬದುಕುತ್ತಿರುವ ಅಂಗವಿಕಲರನ್ನು ಕಡೆಗಣಿಸಲಾಗಿದೆ. ದೇಶದಲ್ಲಿ ಒಟ್ಟಾರೆ ಜನಸಂಖ್ಯೆಯ ಶೇ 5ರಷ್ಟು ಇದ್ದು, ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.