ಸೋಮವಾರ ಬೆಳಿಗ್ಗೆ 11ಕ್ಕೆ ಅವಿಶ್ವಾಸ ನಿರ್ಣಯ ಸಭೆ ನಿಗದಿ ಆಗಿತ್ತು. ಪ್ರಕ್ರಿಯೆಗಳನ್ನು ನಡೆಸಲು ಪ್ರಾದೇಶಿಕ ಆಯುಕ್ತ ನವೀನ್ರಾಜ್ ಸಿಂಗ್ ಜಿಲ್ಲಾ ಪಂಚಾಯಿತಿ ಸಭಾಂಗಣಕ್ಕೆ ಬಂದರು. ಈ ವೇಳೆ ಬಿಜೆಪಿ ಯಶೋದಮ್ಮ, ಮಹಾಲಿಂಗಯ್ಯ, ನರಸಿಂಹಮೂರ್ತಿ, ಜೆಡಿಎಸ್ನ ರಾಮಚಂದ್ರಪ್ಪ, ರಾಮಕೃಷ್ಣಪ್ಪ ಮಾತ್ರ ಅವಿಶ್ವಾಸ ನಿರ್ಣಯ ಸಭೆಯಲ್ಲಿ ಪಾಲ್ಗೊಂಡರು.