ವಿಶ್ವವಿದ್ಯಾಲಯ ಕುಲಸಚಿವ ಸ್ಥಾನಕ್ಕೆ ಕೊರಟಗೆರೆ ತಹಶೀಲ್ದಾರ್ನಯಿದಾ ಜಮ್ ಜಮ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ವಿ.ವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ತಹಶೀಲ್ದಾರ್ ವಿ.ವಿಗೆ ಬಂದು ಜಮೀನಿನ ಪಟ್ಟಾ, ಪಹಣಿ ಮಾಡಿಕೊಡಬಹುದು’ ಎಂದು ಹೇಳುವ ಮೂಲಕ ಶಿವಚಿತ್ತಪ್ಪ ವಿವಾದಕ್ಕೆ ಸಿಲುಕಿದ್ದರು. ವಿವಾದ ತೀವ್ರ ಸ್ವರೂಪ ಪಡೆದುಕೊಂಡ ನಂತರ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ ಮೈಸೂರು ವಿ.ವಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.