<p><strong>ಕುಣಿಗಲ್:</strong> ಕೋವಿಡ್ ಎರಡನೇ ಅಲೆ ತೀವ್ರವಾಗಿದ್ದು, ಸಾರ್ವಜನಿಕರು ಪರದಾಡುತ್ತಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕ ಸ್ಥಗಿತಗೊಂಡಿದೆ. ವೈದ್ಯಾಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನಹರಿಸುತ್ತಿಲ್ಲ ಎಂದು ನಾಗರಿಕರು ಆರೋಪಿಸಿದ್ದಾರೆ.</p>.<p>ತಾಲ್ಲೂಕಿನಲ್ಲಿ 2017ರಲ್ಲಿ ಡೆಂಗಿ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾದಾಗ ಅಂದಿನ ಶಾಸಕ ಡಿ.ನಾಗರಾಜಯ್ಯನವರ ಸಲಹೆ ಮೇರೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕ ಪ್ರಾರಂಭಿಸಲಾಗಿತ್ತು. ಪ್ರಾರಂಭದ ದಿನಗಳಲ್ಲಿ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿದ ಘಟಕ ನಂತರದ ದಿನಗಳಲ್ಲಿ ಸ್ಥಗಿತಗೊಂಡಿದೆ.</p>.<p>ಕಳೆದ ವರ್ಷದಿಂದ ತಾಲ್ಲೂಕಿನಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ನೂರಾರು ಮಂದಿ ಪರದಾಡುತ್ತಿದ್ದಾರೆ. ಸೋಂಕಿತರನ್ನು ಕೋವಿಡ್ ವಿಶೇಷ ವಾರ್ಡ್ನಲ್ಲಿ ಮತ್ತು ವಸತಿಶಾಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಸಾರ್ವಜನಿಕ ಆಸ್ಪತ್ರೆಯಲ್ಲಿರುವ ತೀವ್ರ ನಿಗಾ ಘಟಕವನ್ನು ಬಳಸಿಕೊಳ್ಳಲು ವೈದ್ಯರು ವಿಫಲರಾಗಿದ್ದಾರೆ.</p>.<p>ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಐದು ಬೆಡ್ ಮತ್ತು ಮೂರು ವೆಂಟಿಲೇಟರ್ ಗಳಿದ್ದರೂ, ವೈದ್ಯರ ನಿರ್ಲಕ್ಷದಿಂದ ಬಳಕೆಯಾಗದ ಕಾರಣ ರೋಗಿಗಳು ಪರದಾಡುವ ಸ್ಥಿತಿ ಮುಂದುವರೆದಿದೆ.</p>.<p>ಶಾಸಕರು ಕಳೆದ ಐದು ದಿನಗಳಿಂದ ನಿರಂತರವಾಗಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆಗಾಗಿ ದಾಖ<br />ಲಾಗಿರುವ ಸೋಂಕಿತರೊಂದಿಗೆ ಚರ್ಚಿಸಿ ಸೂಕ್ತ ಮಾರ್ಗ<br />ದರ್ಶನ ನೀಡಿ ಆತ್ಮಸ್ಥೈರ್ಯ ತುಂಬುತ್ತಿದ್ದಾರೆ. ಆದರೆ ಸ್ಥಗಿತ<br />ಗೊಂಡಿರುವ ತೀವ್ರ ನಿಗಾ ಘಟಕದ ಬಗ್ಗೆ ಗಮನಹರಿಸುತ್ತಿಲ್ಲ. ಘಟಕದಲ್ಲಿ ವೆಂಟಿಲೇಟರ್ ಸೌಲಭ್ಯವಿರುವುದರಿಂದ ಗಂಭೀರಗೊಂಡ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡುವ ಮೂಲಕ ಜೀವ ಉಳಿಸುವ ಕಾರ್ಯಕ್ಕೆ ಮತ್ತು ತೀವ್ರ ನಿಗಾ ಘಟಕದ ಮರುಚಾಲನೆಗೆ ಗಮನಹರಿಸಲು ವೆಂಕಟೇಶ್, ರಂಗಸ್ವಾಮಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ಕೋವಿಡ್ ಎರಡನೇ ಅಲೆ ತೀವ್ರವಾಗಿದ್ದು, ಸಾರ್ವಜನಿಕರು ಪರದಾಡುತ್ತಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕ ಸ್ಥಗಿತಗೊಂಡಿದೆ. ವೈದ್ಯಾಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನಹರಿಸುತ್ತಿಲ್ಲ ಎಂದು ನಾಗರಿಕರು ಆರೋಪಿಸಿದ್ದಾರೆ.</p>.<p>ತಾಲ್ಲೂಕಿನಲ್ಲಿ 2017ರಲ್ಲಿ ಡೆಂಗಿ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾದಾಗ ಅಂದಿನ ಶಾಸಕ ಡಿ.ನಾಗರಾಜಯ್ಯನವರ ಸಲಹೆ ಮೇರೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕ ಪ್ರಾರಂಭಿಸಲಾಗಿತ್ತು. ಪ್ರಾರಂಭದ ದಿನಗಳಲ್ಲಿ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿದ ಘಟಕ ನಂತರದ ದಿನಗಳಲ್ಲಿ ಸ್ಥಗಿತಗೊಂಡಿದೆ.</p>.<p>ಕಳೆದ ವರ್ಷದಿಂದ ತಾಲ್ಲೂಕಿನಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ನೂರಾರು ಮಂದಿ ಪರದಾಡುತ್ತಿದ್ದಾರೆ. ಸೋಂಕಿತರನ್ನು ಕೋವಿಡ್ ವಿಶೇಷ ವಾರ್ಡ್ನಲ್ಲಿ ಮತ್ತು ವಸತಿಶಾಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಸಾರ್ವಜನಿಕ ಆಸ್ಪತ್ರೆಯಲ್ಲಿರುವ ತೀವ್ರ ನಿಗಾ ಘಟಕವನ್ನು ಬಳಸಿಕೊಳ್ಳಲು ವೈದ್ಯರು ವಿಫಲರಾಗಿದ್ದಾರೆ.</p>.<p>ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಐದು ಬೆಡ್ ಮತ್ತು ಮೂರು ವೆಂಟಿಲೇಟರ್ ಗಳಿದ್ದರೂ, ವೈದ್ಯರ ನಿರ್ಲಕ್ಷದಿಂದ ಬಳಕೆಯಾಗದ ಕಾರಣ ರೋಗಿಗಳು ಪರದಾಡುವ ಸ್ಥಿತಿ ಮುಂದುವರೆದಿದೆ.</p>.<p>ಶಾಸಕರು ಕಳೆದ ಐದು ದಿನಗಳಿಂದ ನಿರಂತರವಾಗಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆಗಾಗಿ ದಾಖ<br />ಲಾಗಿರುವ ಸೋಂಕಿತರೊಂದಿಗೆ ಚರ್ಚಿಸಿ ಸೂಕ್ತ ಮಾರ್ಗ<br />ದರ್ಶನ ನೀಡಿ ಆತ್ಮಸ್ಥೈರ್ಯ ತುಂಬುತ್ತಿದ್ದಾರೆ. ಆದರೆ ಸ್ಥಗಿತ<br />ಗೊಂಡಿರುವ ತೀವ್ರ ನಿಗಾ ಘಟಕದ ಬಗ್ಗೆ ಗಮನಹರಿಸುತ್ತಿಲ್ಲ. ಘಟಕದಲ್ಲಿ ವೆಂಟಿಲೇಟರ್ ಸೌಲಭ್ಯವಿರುವುದರಿಂದ ಗಂಭೀರಗೊಂಡ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡುವ ಮೂಲಕ ಜೀವ ಉಳಿಸುವ ಕಾರ್ಯಕ್ಕೆ ಮತ್ತು ತೀವ್ರ ನಿಗಾ ಘಟಕದ ಮರುಚಾಲನೆಗೆ ಗಮನಹರಿಸಲು ವೆಂಕಟೇಶ್, ರಂಗಸ್ವಾಮಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>