‘ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಮಾಡಲಾಗಿದೆ. ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ’ ಎಂದು ಆರೋಪಿಸಿ ತಹಶೀಲ್ದಾರ್ ಹಾಗೂ ನೊಣವಿನಕೆರೆ ಪೊಲೀಸರಿಗೆ ಪರಿಶಿಷ್ಟ ಜಾತಿಯ ಮುಖಂಡರು ದೂರು ಸಲ್ಲಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಎರಡು ಸಮುದಾಯದವರ ಜತೆಗೆ ಮಾತುಕತೆ ನಡೆಸಿ ವಿವಾದ ಬಗೆಹರಿಸಲು, ತಹಶೀಲ್ದಾರ್, ಪೊಲೀಸರು ಮುಂದಾಗಿದ್ದಾರೆ.