‘ಹಲವು ದಿನಗಳಿಂದ ಇಲಾಖೆ ಮತ್ತು ಅಧಿಕಾರಿಗಳ ಬಳಿ ಅಲೆದರೂ ಇದುವರೆಗೂ ಪರಿಹಾರ ಬಂದಿಲ್ಲ. ಈ ಯೋಜನೆಗಾಗಿ ಗ್ರಾಮದ ರೈತರು 52.28 ಎಕರೆ ಭೂಮಿ ನೀಡಿದ್ದರೂ ಹಡವನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಕೆರೆಗಳಿಗೆ ಹಾಗೂ ಹೊನ್ನೇನಹಳ್ಳಿ ಕೆರೆಗೆ ನೀರಿನ ಹಂಚಿಕೆಯ ಪ್ರಸ್ತಾಪವನ್ನು ಕೈ ಬಿಟ್ಟಿರುವುದು ಸರಿಯಲ್ಲ. ಈ ಕೆರೆಗೆ 20 ಎಂಸಿಎಫ್ಟಿ ನೀರು ಹಂಚಿಕೆ ಮಾಡಲು ಕಾರ್ಯಯೋಜನೆ ರೂಪಿಸಬೇಕು. ಹಾಗೂ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಕಾಮಗಾರಿ ನಡೆಯಲು ಬಿಡುವುದಿಲ್ಲ’ ಎಂದು ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದರು.