<p><strong>ತುರುವೇಕೆರೆ:</strong> ತಾಲ್ಲೂಕಿನ ಕ್ಷೇತ್ರ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಕಾಮಗಾರಿಯನ್ನು ಶಾಸಕ ಮಸಾಲ ಜಯರಾಂ ವೀಕ್ಷಿಸಿದರು.</p>.<p>ದಂಡಿನಶಿವರ ಹೋಬಳಿ ಹೋನ್ನೆನಹಳ್ಳಿ ಹಾಗೂ ಹಡವನಹಳ್ಳಿ ಅಕ್ಕಪಕ್ಕದ ಗ್ರಾಮಸ್ಥರು ತಮ್ಮ ವಿವಿಧ ಸಮಸ್ಯೆಗಳ ಕುರಿತು ಶಾಸಕರಲ್ಲಿ ಹೇಳಿಕೊಂಡರು.</p>.<p>ಆಗ ಸ್ಥಳದಲ್ಲಿದ್ದ ಎತ್ತಿನ ಹೊಳೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಅವರಿಗೆ, ಎತ್ತಿನ ಹೊಳೆ ಯೋಜನೆಗಾಗಿ ನೂರಾರು ರೈತರಿಂದ ಸ್ವಾಧೀನ ಪಡಿಸಿಕೊಂಡಿರುವ ಜಮೀನಿಗೆ ಪರಿಹಾರ ನೀಡಬೇಕು ಎಂದು ಸೂಚಿಸಿದರು.</p>.<p>‘ಹಲವು ದಿನಗಳಿಂದ ಇಲಾಖೆ ಮತ್ತು ಅಧಿಕಾರಿಗಳ ಬಳಿ ಅಲೆದರೂ ಇದುವರೆಗೂ ಪರಿಹಾರ ಬಂದಿಲ್ಲ. ಈ ಯೋಜನೆಗಾಗಿ ಗ್ರಾಮದ ರೈತರು 52.28 ಎಕರೆ ಭೂಮಿ ನೀಡಿದ್ದರೂ ಹಡವನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಕೆರೆಗಳಿಗೆ ಹಾಗೂ ಹೊನ್ನೇನಹಳ್ಳಿ ಕೆರೆಗೆ ನೀರಿನ ಹಂಚಿಕೆಯ ಪ್ರಸ್ತಾಪವನ್ನು ಕೈ ಬಿಟ್ಟಿರುವುದು ಸರಿಯಲ್ಲ. ಈ ಕೆರೆಗೆ 20 ಎಂಸಿಎಫ್ಟಿ ನೀರು ಹಂಚಿಕೆ ಮಾಡಲು ಕಾರ್ಯಯೋಜನೆ ರೂಪಿಸಬೇಕು. ಹಾಗೂ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಕಾಮಗಾರಿ ನಡೆಯಲು ಬಿಡುವುದಿಲ್ಲ’ ಎಂದು ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದರು.</p>.<p>ಎತ್ತಿನಹೊಳೆ ಸಹಾಯಕ ಎಂಜಿನಿಯರ್ ಸುರೇಶ್, ಮುಖಂಡ ಹೊನ್ನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ತಾಲ್ಲೂಕಿನ ಕ್ಷೇತ್ರ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಕಾಮಗಾರಿಯನ್ನು ಶಾಸಕ ಮಸಾಲ ಜಯರಾಂ ವೀಕ್ಷಿಸಿದರು.</p>.<p>ದಂಡಿನಶಿವರ ಹೋಬಳಿ ಹೋನ್ನೆನಹಳ್ಳಿ ಹಾಗೂ ಹಡವನಹಳ್ಳಿ ಅಕ್ಕಪಕ್ಕದ ಗ್ರಾಮಸ್ಥರು ತಮ್ಮ ವಿವಿಧ ಸಮಸ್ಯೆಗಳ ಕುರಿತು ಶಾಸಕರಲ್ಲಿ ಹೇಳಿಕೊಂಡರು.</p>.<p>ಆಗ ಸ್ಥಳದಲ್ಲಿದ್ದ ಎತ್ತಿನ ಹೊಳೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಅವರಿಗೆ, ಎತ್ತಿನ ಹೊಳೆ ಯೋಜನೆಗಾಗಿ ನೂರಾರು ರೈತರಿಂದ ಸ್ವಾಧೀನ ಪಡಿಸಿಕೊಂಡಿರುವ ಜಮೀನಿಗೆ ಪರಿಹಾರ ನೀಡಬೇಕು ಎಂದು ಸೂಚಿಸಿದರು.</p>.<p>‘ಹಲವು ದಿನಗಳಿಂದ ಇಲಾಖೆ ಮತ್ತು ಅಧಿಕಾರಿಗಳ ಬಳಿ ಅಲೆದರೂ ಇದುವರೆಗೂ ಪರಿಹಾರ ಬಂದಿಲ್ಲ. ಈ ಯೋಜನೆಗಾಗಿ ಗ್ರಾಮದ ರೈತರು 52.28 ಎಕರೆ ಭೂಮಿ ನೀಡಿದ್ದರೂ ಹಡವನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಕೆರೆಗಳಿಗೆ ಹಾಗೂ ಹೊನ್ನೇನಹಳ್ಳಿ ಕೆರೆಗೆ ನೀರಿನ ಹಂಚಿಕೆಯ ಪ್ರಸ್ತಾಪವನ್ನು ಕೈ ಬಿಟ್ಟಿರುವುದು ಸರಿಯಲ್ಲ. ಈ ಕೆರೆಗೆ 20 ಎಂಸಿಎಫ್ಟಿ ನೀರು ಹಂಚಿಕೆ ಮಾಡಲು ಕಾರ್ಯಯೋಜನೆ ರೂಪಿಸಬೇಕು. ಹಾಗೂ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಕಾಮಗಾರಿ ನಡೆಯಲು ಬಿಡುವುದಿಲ್ಲ’ ಎಂದು ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದರು.</p>.<p>ಎತ್ತಿನಹೊಳೆ ಸಹಾಯಕ ಎಂಜಿನಿಯರ್ ಸುರೇಶ್, ಮುಖಂಡ ಹೊನ್ನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>