<p>ಪ್ರಜಾವಾಣಿ ವಾರ್ತೆ</p>.<p>ಪಾವಗಡ: ಕೃಷಿ ಇಲಾಖೆಯ ಸವಲತ್ತುಗಳನ್ನು ಬಳಸಿಕೊಂಡು ರೈತರು ಉತ್ತಮ ಬೆಳೆ ಬೆಳೆಯಬೇಕು ಎಂದು ಶಾಸಕ ಎಚ್.ವಿ ವೆಂಕಟೇಶ್ ಹೇಳಿದರು.</p>.<p>ಪಟ್ಟಣದಲ್ಲಿ ಸೋಮವಾರ ಕೃಷಿ ಇಲಾಖೆಯಿಂದ ಶೇಂಗಾ ಸೇರಿದಂತೆ ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.</p>.<p>ಗುಣಮಟ್ಟದ ಬಿತ್ತನೆ ಬೀಜ ವಿತರಿಸಬೇಕು. ತಾಲ್ಲೂಕಿಗೆ ಒಟ್ಟು 750 ಕ್ವಿಂಟಲ್ ಬಿತ್ತನೆ ಶೇಂಗಾ ಬಂದಿದೆ. ರೈತರಿಗೆ ಅನುಕೂಲವಾಗುವಂತೆ ತಾಲ್ಲೂಕಿನ 5 ಕೇಂದ್ರಗಳಲ್ಲಿ ಬಿತ್ತನೆ ಬೀಜ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.</p>.<p>ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಜಯ್ ಕುಮಾರ್, ನಾಲ್ಕು ರೈತ ಸಂಪರ್ಕ ಕೇಂದ್ರ, ಲಿಂಗದಹಳ್ಳಿಯ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ಶೇಂಗಾ, ಭತ್ತ, ರಾಗಿ, ತೊಗರಿ, ಅಲಸಂದೆ ಬೀಜ ವಿತರಿಸಲಾಗುತ್ತಿದೆ ಎಂದರು.</p>.<p>ಬೇರೆ ಮಾರುಕಟ್ಟೆಗೆ ಹೋಲಿಸಿದರೆ ಕೃಷಿ ಇಲಾಖೆಯಿಂದ ವಿತರಿಸುತ್ತಿರುವ ಬಿತ್ತನೆ ಬೀಜದ ಬೆಲೆ ಹೆಚ್ಚಾಗಿದೆ. ಬೆಲೆಯನ್ನು ಕಡಿಮೆ ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.</p>.<p>ಕೃಷಿ ಇಲಾಖೆಯ ಶಂಶುದ್ದಉನ್ನೀಸಾ, ಗುರುರಾಜ್, ಬಾಲಾಜಿ, ನಾಗೇಂದ್ರ, ಪೂಜಾರಪ್ಪ, ನರಸಿಂಹ ರೆಡ್ಡಿ, ಕೃಷ್ಣರಾವ್, ಶಿವು, ಶಿವಕುಮಾರ್, ಆರ್.ಎ.ಹನುಮಂತರಾಯಪ್ಪ, ಹರ್ಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಪಾವಗಡ: ಕೃಷಿ ಇಲಾಖೆಯ ಸವಲತ್ತುಗಳನ್ನು ಬಳಸಿಕೊಂಡು ರೈತರು ಉತ್ತಮ ಬೆಳೆ ಬೆಳೆಯಬೇಕು ಎಂದು ಶಾಸಕ ಎಚ್.ವಿ ವೆಂಕಟೇಶ್ ಹೇಳಿದರು.</p>.<p>ಪಟ್ಟಣದಲ್ಲಿ ಸೋಮವಾರ ಕೃಷಿ ಇಲಾಖೆಯಿಂದ ಶೇಂಗಾ ಸೇರಿದಂತೆ ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.</p>.<p>ಗುಣಮಟ್ಟದ ಬಿತ್ತನೆ ಬೀಜ ವಿತರಿಸಬೇಕು. ತಾಲ್ಲೂಕಿಗೆ ಒಟ್ಟು 750 ಕ್ವಿಂಟಲ್ ಬಿತ್ತನೆ ಶೇಂಗಾ ಬಂದಿದೆ. ರೈತರಿಗೆ ಅನುಕೂಲವಾಗುವಂತೆ ತಾಲ್ಲೂಕಿನ 5 ಕೇಂದ್ರಗಳಲ್ಲಿ ಬಿತ್ತನೆ ಬೀಜ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.</p>.<p>ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಜಯ್ ಕುಮಾರ್, ನಾಲ್ಕು ರೈತ ಸಂಪರ್ಕ ಕೇಂದ್ರ, ಲಿಂಗದಹಳ್ಳಿಯ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ಶೇಂಗಾ, ಭತ್ತ, ರಾಗಿ, ತೊಗರಿ, ಅಲಸಂದೆ ಬೀಜ ವಿತರಿಸಲಾಗುತ್ತಿದೆ ಎಂದರು.</p>.<p>ಬೇರೆ ಮಾರುಕಟ್ಟೆಗೆ ಹೋಲಿಸಿದರೆ ಕೃಷಿ ಇಲಾಖೆಯಿಂದ ವಿತರಿಸುತ್ತಿರುವ ಬಿತ್ತನೆ ಬೀಜದ ಬೆಲೆ ಹೆಚ್ಚಾಗಿದೆ. ಬೆಲೆಯನ್ನು ಕಡಿಮೆ ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.</p>.<p>ಕೃಷಿ ಇಲಾಖೆಯ ಶಂಶುದ್ದಉನ್ನೀಸಾ, ಗುರುರಾಜ್, ಬಾಲಾಜಿ, ನಾಗೇಂದ್ರ, ಪೂಜಾರಪ್ಪ, ನರಸಿಂಹ ರೆಡ್ಡಿ, ಕೃಷ್ಣರಾವ್, ಶಿವು, ಶಿವಕುಮಾರ್, ಆರ್.ಎ.ಹನುಮಂತರಾಯಪ್ಪ, ಹರ್ಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>