ಕೆಲ ದಿನಗಳಿಂದ ಧರ್ಮ, ಧರ್ಮದ ನಡುವೆ ಜಗಳ ತರುವಂತಹ ಕೆಲಸ ಮಾಡುತ್ತಿರುವುದು ಸರಿಯಲ್ಲ. ಇಂತಹ ಸಂದರ್ಭದಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಸಮಾಜಕ್ಕೆ ಮಾರಕವಾಗುವಂತಹ ಹೇಳಿಕೆ ನೀಡುವ ಹಾಗೂ ಒತ್ತಡ ಹಾಕುವುದನ್ನು ತಡೆಯಬೇಕು. ರಾಜ್ಯ, ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸುವ ನಿಟ್ಟಿನಲ್ಲಿ ಸರ್ಕಾರಗಳು ಕೆಲಸ ಮಾಡಬೇಕು. ಇದೇ ರೀತಿಯ ಪರಿಸ್ಥಿತಿ ಮುಂದುವರಿದರೆ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.