ತುಮಕೂರು: ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಬಳಿ ಪ್ರತಿಭಟನೆ ನಡೆಸಿದ ಎನ್ಎಸ್ಯುಐ ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಜೈಲಿಗೆ ಕಳುಹಿಸಿರುವ ಪೊಲೀಸ್ ಅಧಿಕಾರಿಗಳು ಮುಂದಿನ ದಿನಗಳಲ್ಲಿಉತ್ತರ ಕೊಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದರು.
ಜಿಲ್ಲಾ ಕಾರಾಗೃಹದಲ್ಲಿರುವ ಎನ್ಎಸ್ಯುಐ ಕಾರ್ಯಕರ್ತರನ್ನು ಶನಿವಾರ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಅವರ ಒತ್ತಡಕ್ಕೆ ಮಣಿದು ಪ್ರತಿಭಟನಕಾರರ ವಿರುದ್ಧ ಸುಳ್ಳು ಸೆಕ್ಷನ್ ಹಾಕಿಜಾಮೀನು ಸಿಗದಂತೆ ಮಾಡಲಾಗಿದೆ. ಈ ಕೃತ್ಯಕ್ಕಾಗಿ ಪೊಲೀಸ್ ಅಧಿಕಾರಿಗಳೂ ಮುಂದೆ ಶಿಕ್ಷೆ ಅನುಭವಿಸ ಬೇಕಾಗುತ್ತದೆ’ ಎಂದು ಎಚ್ಚರಿಸಿದರು.