<p><strong>ತುಮಕೂರು</strong>: ‘ಮುಖ್ಯಮಂತ್ರಿ ಆಗಬೇಕಾದರೆ ಶಾಸಕರು ಲೆಕ್ಕಕ್ಕೆ ಇಲ್ಲ. ಹೈಕಮಾಂಡ್ ಮುಖ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿರುವುದು ಮೂರ್ಖತನದ ಪರಮಾವಧಿ’ ಎಂದು ಶಾಸಕ ಕೆ.ಎನ್.ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕರು ಲೆಕ್ಕಕ್ಕೆ ಇಲ್ಲ ಎಂದು ಹೇಳುವುದು ಮೂರ್ಖತನ. ಇಂತಹ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು’ ಎಂದರು.</p>.<p>‘ಸಿದ್ದರಾಮಯ್ಯ ಅವರು ಶಾಸಕರಿಂದ ಆಯ್ಕೆಯಾಗಿ, ಮುಖ್ಯಮಂತ್ರಿ ಆಗಿದ್ದಾರೆ. ಮುಂದೆ ಮುಖ್ಯಮಂತ್ರಿ ಬದಲಾವಣೆ ವೇಳೆ ಹೈಕಮಾಂಡ್ ವೀಕ್ಷಕರನ್ನು ಕಳುಹಿಸಿ, ಶಾಸಕರಿಂದ ಅಭಿಪ್ರಾಯ ಸಂಗ್ರಹಿಸುತ್ತದೆ. ಈ ಹಿನ್ನೆಲೆ ಇಟ್ಟುಕೊಂಡೇ ಸಿದ್ದರಾಮಯ್ಯ ಅವರು ಶಾಸಕರ ಅಭಿಪ್ರಾಯ ಮುಖ್ಯ ಎಂದಿದ್ದಾರೆ’ ಎಂದರು.</p>.<p>ದೇವರಾಜ ಅರಸು ಶಾಸಕ ಆಗಿರದಿದ್ದರೂ ಮುಖ್ಯಮಂತ್ರಿಯಾಗಿದ್ದರು. ಇದಕ್ಕೆಲ್ಲ ಶಾಸಕರ ಅಭಿಪ್ರಾಯ, ಬೆಂಬಲವೇ ಮುಖ್ಯವಾಗಿತ್ತು ಎಂದರು.</p>.<p>‘ಸಚಿವ ಸ್ಥಾನದಿಂದ ವಜಾ ಮಾಡಿದ ನಂತರ ಹೈಕಮಾಂಡ್ಗೆ ಪತ್ರ ಬರೆಯುತ್ತಲೇ ಇದ್ದೇನೆ. ಭೇಟಿಯಾಗಲು ಅವಕಾಶ ನೀಡಿಲ್ಲ. ಸಮಯಕೊಟ್ಟರೆ ಭೇಟಿಯಾಗಿ ಎಲ್ಲ ವಿಚಾರಗಳನ್ನೂ ತಿಳಿಸುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ‘ಮುಖ್ಯಮಂತ್ರಿ ಆಗಬೇಕಾದರೆ ಶಾಸಕರು ಲೆಕ್ಕಕ್ಕೆ ಇಲ್ಲ. ಹೈಕಮಾಂಡ್ ಮುಖ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿರುವುದು ಮೂರ್ಖತನದ ಪರಮಾವಧಿ’ ಎಂದು ಶಾಸಕ ಕೆ.ಎನ್.ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕರು ಲೆಕ್ಕಕ್ಕೆ ಇಲ್ಲ ಎಂದು ಹೇಳುವುದು ಮೂರ್ಖತನ. ಇಂತಹ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು’ ಎಂದರು.</p>.<p>‘ಸಿದ್ದರಾಮಯ್ಯ ಅವರು ಶಾಸಕರಿಂದ ಆಯ್ಕೆಯಾಗಿ, ಮುಖ್ಯಮಂತ್ರಿ ಆಗಿದ್ದಾರೆ. ಮುಂದೆ ಮುಖ್ಯಮಂತ್ರಿ ಬದಲಾವಣೆ ವೇಳೆ ಹೈಕಮಾಂಡ್ ವೀಕ್ಷಕರನ್ನು ಕಳುಹಿಸಿ, ಶಾಸಕರಿಂದ ಅಭಿಪ್ರಾಯ ಸಂಗ್ರಹಿಸುತ್ತದೆ. ಈ ಹಿನ್ನೆಲೆ ಇಟ್ಟುಕೊಂಡೇ ಸಿದ್ದರಾಮಯ್ಯ ಅವರು ಶಾಸಕರ ಅಭಿಪ್ರಾಯ ಮುಖ್ಯ ಎಂದಿದ್ದಾರೆ’ ಎಂದರು.</p>.<p>ದೇವರಾಜ ಅರಸು ಶಾಸಕ ಆಗಿರದಿದ್ದರೂ ಮುಖ್ಯಮಂತ್ರಿಯಾಗಿದ್ದರು. ಇದಕ್ಕೆಲ್ಲ ಶಾಸಕರ ಅಭಿಪ್ರಾಯ, ಬೆಂಬಲವೇ ಮುಖ್ಯವಾಗಿತ್ತು ಎಂದರು.</p>.<p>‘ಸಚಿವ ಸ್ಥಾನದಿಂದ ವಜಾ ಮಾಡಿದ ನಂತರ ಹೈಕಮಾಂಡ್ಗೆ ಪತ್ರ ಬರೆಯುತ್ತಲೇ ಇದ್ದೇನೆ. ಭೇಟಿಯಾಗಲು ಅವಕಾಶ ನೀಡಿಲ್ಲ. ಸಮಯಕೊಟ್ಟರೆ ಭೇಟಿಯಾಗಿ ಎಲ್ಲ ವಿಚಾರಗಳನ್ನೂ ತಿಳಿಸುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>