ತೈಲ ಬೆಲೆ ಏರಿಕೆಯಿಂದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ರೈತರು ರಸಗೊಬ್ಬರ ಬಳಸದಂತಾಗಿದೆ. ಬಡವರು ಮನೆ ನಿರ್ಮಾಣ ಮಾಡಲು ಬಳಸುವ ಸಿಮೆಂಟ್, ಕಬ್ಬಿಣದ ಬೆಲೆ ಗಗನ ಮುಟ್ಟಿದೆ. ಸರ್ಕಾರಿ, ಖಾಸಗಿ ಕ್ಷೇತ್ರದ ಉದ್ಯೋಗಿಗಳ ಸಂಬಳ ಮಾತ್ರ ಹೆಚ್ಚಳವಾಗಿಲ್ಲ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಮೊತ್ತ ಏರಿಕೆ ಮಾಡಿಲ್ಲ. ಆದರೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ಬದುಕುವುದು ಕಷ್ಟಕರವಾಗಿದೆ. ಆದರೂ ತೈಲ ಬೆಲೆ ಇಳಿಸುತ್ತಿಲ್ಲ ಎಂದು ಆರೋಪಿಸಿದರು.